Webdunia - Bharat's app for daily news and videos

Install App

ಚಿಂದಿ ಆಯುವವರ ನಡುವೆ ಜಗಳ ಉಂಟಾಗಿ ಕೊಲೆಯಲ್ಲಿ ಅಂತ್ಯ

Webdunia
ಶುಕ್ರವಾರ, 17 ಸೆಪ್ಟಂಬರ್ 2021 (21:35 IST)
ಬೆಂಗಳೂರು: ಚಿಂದಿ ಆಯುವವರ ನಡುವೆ ಜಗಳ ಉಂಟಾಗಿ ಕೊಲೆಯಲ್ಲಿ ಅಂತ್ಯವಾಗಿದ್ದ ಪ್ರಕರಣವನ್ನು ಬೊಮ್ಮನಹಳ್ಳಿ ಠಾಣಾ ಪೊಲೀಸರು ಭೇದಿಸಿದ್ದು, ಮೂವರನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ದೀಪಕ್, ಹೇಮಂತ್​ ಗೋಪ್​, ಮಾದೇಶ್​ ಎಂಬುವರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಸೆ.13ರಂದು ಬೊಮ್ಮನಹಳ್ಳಿಯ 1ನೇ ಕ್ರಾಸ್​​ನಲ್ಲಿ 20 ರೂ. ವಿಚಾರಕ್ಕೆ ಚಿಂದಿ ಆಯುವವರ ನಡುವೆ ಜಗಳ ಶುರುವಾಗಿತ್ತು. ಈ ವೇಳೆ ದೀಪಕ್, ಹೇಮಂತ್​ ಗೋಪ್​, ಮಾದೇಶ್ ಎಂಬುವರು ಸಂಜಯ್ ಅಲಿಯಾಸ್​ ನೇಪಾಳಿ (30) ಎಂಬಾತನನ್ನು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದರು ಎನ್ನಲಾಗಿದೆ.
ಆರೋಪಿಗಳು ಸಿಗುವವರೆಗೂ ಸತ್ತವನ ಮಾಹಿತಿಯಾಗಲೀ, ಕೊಲೆ ಮಾಡಿದವರ ಮಾಹಿತಿಯಾಗಲೀ ಸಿಕ್ಕಿರಲಿಲ್ಲ. ವೈನ್ ಶಾಪ್ ಕ್ಯಾಶಿಯರ್ ಕೊಟ್ಟ ಒಂದು ಸುಳಿವಿನಿಂದಾಗಿ ಪೊಲೀಸರು ಹಂತಕರ ಹೆಡೆಮುರಿ ಕಟ್ಟಿದ್ದಾರೆ. ಘಟನೆಯ ದಿನ ಸಂಜಯ್ ಹಾಗೂ ಆರೋಪಿ ದೀಪಕ್ ಒಂದೇ ವೈನ್​ ಶಾಪ್​ನಲ್ಲಿ ಮದ್ಯ ಖರೀದಿಸಿದ್ದರು. ವೈನ್ ಶಾಪ್​ನ ಸಿಸಿಟಿವಿ ದೃಶ್ಯಾವಳಿಗಳನ್ನಾಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದರು.
ನಗರದ ವಿವಿಧ ಭಾಗಗಳಲ್ಲಿ ಚಿಂದಿ ಆಯುವವರನ್ನು ಕರೆತಂದು ಪೊಲೀಸರು ವಿಚಾರಣೆ ನಡೆಸಿದ್ದರು. ತನಿಖೆ ವೇಳೆ ದೀಪಕ್​​, ತಾನೇ ತನ್ನ ಸಹಚರರೊಂದಿಗೆ ಸೇರಿ ಸಂಜಯ್​ನನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments