Webdunia - Bharat's app for daily news and videos

Install App

ನೈಟ್ ಕರ್ಪ್ಯೂ ಕುರಿತು ಮರುಪರಿಶೀಲನೆ ಮಾಡ್ತಾರಾ? ಸಿಎಂ ಹೇಳಿದ್ದೇನು.?

Webdunia
ಸೋಮವಾರ, 27 ಡಿಸೆಂಬರ್ 2021 (20:16 IST)
ರಾಜ್ಯದಲ್ಲಿ ಒಮಿಕ್ರಾನ್ ಭೀತಿಯ ನಡುವೆ ಹೊಸ ವರ್ಷ ಆಚರಣೆ ನಡೆಸಲು ಎಲ್ಲರು ಸಜ್ಜಾಗುತ್ತಿದ್ದು, ಇದಕೆ ರಾಜ್ಯ ಸರಕಾರ ಬ್ರೇಕ್ ಹಾಕಿದೆ.
ಇಂದು ಸಿಎಂ10 ದಿನಗಳ ಕಾಲ ನೈಟ್ ಕರ್ಪ್ಯೂ ಜಾರಿಗೊಳಿಸಿದ್ದು, ಇದರಲ್ಲಿ ಕೆಲವು ಗೊಂದಲಗಳಿವೆ ಎಂಬ ಕೂಗು ಕೇಳಿಬರುತ್ತಿದೆ. ಇದಕ್ಕೆ ಸಿಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
ಹೊಸ ನಿಯಮದಿಂದ ಪಬ್, ಹೋಟೆಲ್ ಉದ್ಯಮಕ್ಕೆ ಹೊಡೆತ ಬೀಳಲಿದೆ ಎನ್ನುವ ಮಾಲೀಕರ ಮನವಿಗೆ ಪ್ರತಿಕ್ರಿಯಿಸಿರುವ ಸಿಎಂ , ನೈಟ್ ಕರ್ಪ್ಯೂ ಮರುಪರಿಶೀಲನೆ ಇಲ್ಲ ಎಂಬುದಾಗಿ ಹೇಳಿದ್ದಾರೆ.
ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಯಾವುದೇ ಕಾರಣಕ್ಕೂ ನೈಟ್ ಕರ್ಪ್ಯೂ ಬಗ್ಗೆ ಮರು ಪರಿಶೀಲನೆ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
ಒಮಿಕ್ರಾನ್ ಹರಡದಂತೆ ಸೂಕ್ತ ಕ್ರಮ ಕೈಗೊಂಡಿದ್ದೇವೆ. ಫೆಬ್ರವರಿಯಲ್ಲಿ ಒಮಿಕ್ರಾನ್ ಜಾಸ್ತಿಯಾಗುತ್ತೆ ಎಂಬುದಕ್ಕೆ ಪುರಾವೆ ಇಲ್ಲ, ಅದಕ್ಕೆ ಪೂರಕವಾದ ದಾಖಲೆ ಇಲ್ಲ, ಸಂಶೋಧನೆಯೂ ನಡೆದಿಲ್ಲ. ಆದಾಗ್ಯೂ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದೇವೆ. ಈ ಹಿನ್ನೆಲೆ ಮಾರ್ಗೂಸೂಚಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಹೊಸ ವರ್ಷದ ಸಂಭ್ರಮ ಒಮಿಕ್ರಾನ್ ಹರಡಲು ದಾರಿ ಮಾಡಿಕೊಡದಿರಲಿ ಎಂದು ಡಿ.28ರಿಂದ ಜ.7 ರ ವರೆಗೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡುವುದಾಗಿ ಇಂದು ಬೆಳಗ್ಗೆ ಸಿಎಂ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments