Webdunia - Bharat's app for daily news and videos

Install App

ರಾಮನ ದರ್ಶನಕ್ಕಾಗಿ ಹರಿದು ಬಂತು ಭಕ್ತ ಸಾಗರ

Webdunia
ಗುರುವಾರ, 30 ಮಾರ್ಚ್ 2023 (17:30 IST)
ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಿಗ್ಗೆಯೇ ಶ್ರೀರಾಮನನ್ನು ವಿವಿಧ ಹೂಗಳಿಂದ ಅಲಂಕರಿಸಿ ವಿಶೇಷವಾದ ಪೂಜೆಗಳನ್ನು ಮಾಡಲಾಯಿತು.ಇಂದು ವಿಷ್ಣುವಿನ 07ನೇ ಅವಾತರವಾದ ಶ್ರೀ ರಾಮನ ಜನನವಾದ ದಿನ. ಚೈತ್ರ ಮಾಸದ ಒಂಬತ್ತನೇ ದಿನದಂದು ಶ್ರೀ ರಾಮನ ಜನನವಾಗಿತ್ತು ಈ ಹಿನ್ನೆಲೆಯಲ್ಲಿ ನಾಡಿನೆಲ್ಲೆಡೆ ಅತ್ಯಂತ ವಿಜೃಂಭಣೆಯಿಂದ ಶ್ರೀ ರಾಮ ನವಮಿಯನ್ನು ಆಚರಿಸಲಾಯಿತು. ಬೆಳಗಿಂದಲೇ  ರಾಜಾಜಿನಗರದಲ್ಲಿರುವ ರಾಮ ಮಂದಿರಕ್ಕೆ ಸಾಕಷ್ಟು ಭಕ್ತರು ಆಗಮಿಸಿ ಶ್ರೀರಾಮನ ಕೃಪೆಗೆ ಪಾತ್ರರಾದರು. 

ಶ್ರೀ ರಾಮನ ರಥೋತ್ಸವವು ಸಹ ನಡೆಯಿತು ಹಾಗೆ ಈ ವರ್ಷದ ವಿಶೇಷವಾಗಿ ರಾಮ, ಲಕ್ಷ್ಮಣ, ಭರತ ಹಾಗೂ ಶತ್ರುಜ್ಞರ ಪ್ರತಿರೂಪವನ್ನು ತೊಟ್ಟಿಲಿನಲ್ಲಿರಿಸಿ ತೊಟ್ಟಿಲು ಶಾಸ್ತ್ರವನ್ನು ವಿಶೇಷವಾಗಿ ನೆರವೇರಿಸಲಾಯಿತು.ಇನ್ನೂ ಶ್ರೀರಾಮನವಮಿ ಎಂದರೆ ಎಲ್ಲರಿಗೂ ಮೊದಲು ನೆನಪಾಗುವುದು ಪಾನಕ, ಮಜ್ಜಿಗೆ, ಕೊಸಂಬರಿ. ಬೇಸಿಗೆ ಕಾಲವಾಗಿದ್ದು, ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿರುವುದರಿಂದ ಶ್ರಿ ರಾಮ ನವಮಿಗೆ ವಿಶೆಷವಾಗಿ ಪಾನಕ,ಮಜ್ಜಿಗೆ, ಕೊಸಂಬರಿಯನ್ನು ಪ್ರಸಾದದ ರೂಪದಲ್ಲಿ ಹಂಚುತ್ತಾರೆ. ಆಟೋ ಸ್ಟ್ಯಾಂಡ್, ಬಸ್ ಸ್ಟ್ಯಾಂಡ್, ಹೋಟೆಲ್‌ಗಳ ಮುಂಭಾಗ ಹೀಗೆ ಹಲವು ಕಡೆ ಪಾನಕ, ಮಜ್ಜಿಗೆ ಹಾಗೂ ಕೊಸಂಬರಿಗಳನ್ನು ಹಂಚಿದರು.ಒಟ್ಟಿನಲ್ಲಿ ಕಳೆದ ಮೂರು ವರ್ಷಗಳಿಂದ ಕೊವಿಡ್ ಕಾಟದಿಂದ ಶ್ರೀರಾಮ ನವಮಿಯನ್ನು ಆಚರಿಸಲು ಆಗಿರಲಿಲ್ಲ. ಆದರೆ ಈ ವರ್ಷ ಯಾವುದೇ ಭಯವಿಲ್ಲದೆ ಜನರು ಬಹಳ ಸಂತಸದಿಂದ ಶ್ರೀರಾಮ ನವಮಿಯನ್ನು ಆಚರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments