Select Your Language

Notifications

webdunia
webdunia
webdunia
webdunia

ಅಪ್ಪು ಪುಣ್ಯ ಸ್ಮರಣೆಯಲ್ಲಿ ಜನಸಾಗರ

ಅಪ್ಪು ಪುಣ್ಯ ಸ್ಮರಣೆಯಲ್ಲಿ ಜನಸಾಗರ
bangalore , ಶನಿವಾರ, 29 ಅಕ್ಟೋಬರ್ 2022 (15:08 IST)
ಪವರ್ ಸ್ಟಾರ್ ಪುನೀತ್ ರಾಜ್​​ಕುಮಾರ್ ಅಗಲಿ ಇಂದಿಗೆ ಒಂದು ವರ್ಷ. ಅಪ್ಪುರ ಪ್ರಥಮ ವರ್ಷದ ಪುಣ್ಯಸ್ಮರಣೆಗೆ ಜನಸಾಗರವೇ ಹರಿದು ಬರುತ್ತಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಪ್ರಥಮ ಪುಣ್ಯಸ್ಮರಣೆ ಬಹಳ ಪ್ರೀತಿ ಪೂರ್ವಕವಾಗಿ ನಡೆಯುತ್ತಿದೆ. ವಿವಿಧ ಭಾಗಗಳಿಂದ ಅಭಿಮಾನಿಗಳು ಆಗಮಿಸಿ ಪುನೀತ್​ ರಾಜ್​ಕುಮಾರ್​ ದರ್ಶನ ಪಡೆಯುತ್ತಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಪುನೀತ್​ ಬೃಹತ್‌ ಕಟೌಟ್​ಗಳನ್ನು ಹಾಕಲಾಗಿದೆ, ಎಲ್ಲೆಲ್ಲೂ ಅಪ್ಪು ರಾರಾಜಿಸುತ್ತಿದ್ದಾರೆ. ಬಣ್ಣ ಬಣ್ಣದ ಹೂ ಹಾಗೂ ವಿದ್ಯುತ್‌ ದೀಪಗಳಿಂದ ಅಪ್ಪು ಸಮಾಧಿಗೆ ಅಲಂಕಾರ ಮಾಡಲಾಗಿದೆ. ಪುನೀತ್ ಪುಣ್ಯಸ್ಮರಣೆಯಲ್ಲಿ ಭಾಗಿಯಾಗಲು ಹೆಚ್ಚಿನ ಅಭಿಮಾನಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ. ಉತ್ತರ ವಿಭಾಗದ ಡಿಸಿಪಿ ನೇತೃತ್ವದಲ್ಲಿ ನಾಲ್ವರು ಎಸಿಪಿ, 12 ಜನ ಇನ್ಸ್ ಪೆಕ್ಟರ್, 15 ಪಿಎಸ್ಐ ಹಾಗೂ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನೇಮಕ ಮಾಡಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ಸ್ಮರಣೆ ಅಂಗವಾಗಿ ಪುನೀತ್ ಸ್ಯಾಟಿ ಲೈಟ್ ಉದ್ಘಾಟನೆ ಮಾಡಿದ ಸಿಎಂ