Publish Date: Sat, 09 May 2026 (17:28 IST)
Updated Date: Sat, 09 May 2026 (17:31 IST)
ಬೆಂಗಳೂರು: ಭಾನುವಾರ ನಗರದಲ್ಲಿ ಅನೇಕ ಕಾರ್ಯಕ್ರಮಗಳಿರುವ ಕಾರಣ ನಮ್ಮ ಮೆಟ್ರೊ ನೇರಳೆ ಮಾರ್ಗದಲ್ಲಿ ಬೆಳಿಗ್ಗೆ 7ರಿಂದ ಎರಡು ಗಂಟೆ ಭಾಗಶಃ ಸಂಚಾರ ಸ್ಥಗಿತಗೊಳಿಸುವ ಸುತ್ತೋಲೆಯನ್ನು ಬಿಎಂಆರ್ಸಿಎಲ್ ವಾಪಸ್ ಪಡೆದಿದೆ.ಈ ಮೂಲಕ ಪ್ರಯಾಣಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿದೆ.
ಸುತ್ತೋಲೆಯಲ್ಲಿ ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಸೆಂಟ್ರಲ್ ಕಾಲೇಜಿನ ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೊ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಭಾನುವಾರ ಬೆಳಿಗ್ಗೆ 7ರಿಂದ 9ರವರೆಗೆ ಹೊಸಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ ಮತ್ತು ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣಗಳ ನಡುವೆ ಮೆಟ್ರೊ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿತ್ತು.
ಸುತ್ತೋಲೆ ಹಿಂದಕ್ಕೆ ಪಡೆದಿರುವುದಲ್ಲದೇ, ಸಂಚಾರದ ಆರಂಭದ ಸಮಯವನ್ನು ಬದಲು ಮಾಡಿದೆ.
ಅದರಂತೆ ಭಾನುವಾರ ಬೆಳಿಗ್ಗೆ 7ಕ್ಕೆ ಮೆಟ್ರೊ ಸಂಚಾರ ಆರಂಭವಾಗುವ ಬದಲು ಭಾನುವಾರ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭಿಸಲಾಗುವುದು ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ