Webdunia - Bharat's app for daily news and videos

Install App

ಮದುವೆಯಾಗು ಎಂದಿದ್ದಕ್ಕೆ ಪ್ರೀತಿಸಿದ ಯುವತಿಯನ್ನೇ ಮುಗಿಸಿದ ಪಾಪಿ

Sampriya
ಬುಧವಾರ, 24 ಜುಲೈ 2024 (16:10 IST)
ಶಿವಮೊಗ್ಗ: ಪ್ರೀತಿಸಿದ ಯುವತಿ ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ಆಕೆಯನ್ನು ಪ್ರಿಯತಮ ಕೊಲೆ ಮಾಡಿ, ಹೂತು ಹಾಕಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ.

ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಸೌಳ್ಯನ್ನು ಪ್ರಿಯತಮ ಸೃಜನ್ ಎಂಬಾತ ಕೊಲೆ ನಡೆಸಿದ್ದಾನೆ.  ಕೊಲೆಯಾದ ಯುವತಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವಳಾಗಿದ್ದು ಕೊಲೆ ಆರೋಪಿ ಸೃಜನ್ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವನಾಗಿದ್ದಾನೆ. ಇದೀಗ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಸೃಜನ್‌ನನ್ನು ವಶಕ್ಕೆ ಪಡೆದಿದ್ದಾರೆ.

ಪ್ರೀತಿಸಿದ ಯುವತಿ ಪದೇ ಪದೇ ಮದುವೆಯಾಗಲು ಎಂದು ಒತ್ತಾಯಿಸಿದ್ದಕ್ಕೆ ಕೋಪಗೊಂಡ ಸೃಜನ್ ಆಕೆಯನ್ನು ಕೊಲೆ ಮಾಡಿ, ಹೂತಿಟ್ಟಿದ್ದಾನೆ. ಇನ್ನೂ ಮಗಳು ಮನೆಗೆ ವಾಪಾಸ್ಸಾಗದನ್ನು ಕಂಡು ಪೋಷಕರು ಪೊಲೀಸರಿಗೆ ನಾಪತ್ತೆ ಪ್ರಕರಣ ದೂರು ನೀಡಿದ್ದಾರೆ. ಈ ವೇಳೆ ಸೃಜನ್‌ರನ್ನು ಪೊಲೀಸರು ವಿಚಾರಿಸಿದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.  ಇಂದು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments