ಚಿತ್ರಕಲಾ ಪರಿಷತ್ತಿನಲ್ಲಿ ದಸರಾ ಗೊಂಬೆಗಳ ವಿಶೇಷ ಪ್ರದರ್ಶನ

Webdunia
ಶುಕ್ರವಾರ, 8 ಅಕ್ಟೋಬರ್ 2021 (16:56 IST)
chitrakala parishath
ನಾಡ ಹಬ್ಬ ದಸರಾ ಅಂಗವಾಗಿ ಇಂದಿನಿಂದ 10 ದಿನಗಳ ಕಾಲ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ದಸರಾ ಗೊಂಬೆಗಳ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು, ನಟಿ ಸುಶ್ಮಿತಾ ಸಿದ್ದಪ್ಪ ಹಾಗೂ ಸಿಂಧೂ ಗೌಡ ಚಾಲನೆ ನೀಡಿದರು. 
 
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ನಟಿ ಸುಶ್ಮಿತಾ ಸಿದ್ದಪ್ಪ ಮಾತನಾಡಿ, ಚಿತ್ತಾರ ಹಾಗೂ ಗ್ರಾಂಡ್‌ ಫ್ಲಿಯಾ ಮಾರ್ಕೇಟ್‌ ಸಹಯೋಗದಲ್ಲಿ ಆಯೋಜಿಸಲಾಗಿರುವ ಈ ಮಾರಾಟ ಮೇಳದಲ್ಲಿ ದಸರಾ ಆಲಂಕಾರಕ್ಕೆ ಬೇಕಾಗಿರುವ ವಿಶೇಷ ಗೊಂಬೆಗಳು ಹಾಗೂ ಇನ್ನಿತರ ವಸ್ತುಗಳ ಒಂದೇ ವೇದಿಕೆಯ ಅಡಿಯಲ್ಲಿ ದೊರೆಯಲಿವೆ. ಪ್ರತಿ ದಸರಾ ಸಂಧರ್ಭದಲ್ಲೂ ತಮ್ಮ ಬೊಂಬೆಗಳ ಸಂಗ್ರಹದಲ್ಲಿ ಹೊಸತನ ಕಾಪಾಡುವ ನಿಟ್ಟಿನಲ್ಲಿ ಗ್ರಾಹಕರು ಕೆಲವೊಂದು ಗೊಂಬೆಗಳನ್ನು ಖರೀದಿಸುವುದು ನಡೆದು ಬಂದಿರುವ ಸಂಪ್ರದಾಯ. ಇಂತಹ ಸಂಪ್ರದಾಯಕ್ಕೆ ಪುಷ್ಠಿ ಕೊಡುವ ನಿಟ್ಟಿನಲ್ಲಿ ಹಾಗೂ ದಸರಾ ಹಬ್ಬಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಒಂದೇ ವೇದಿಕೆಯಡಿಯಲ್ಲಿ ಕೊಂಡುಕೊಳ್ಳಬಹುದಾಗಿದೆ ಎಂದು ಹೇಳಿದರು. 
 
ನಟಿ ಸಿಂಧೂ ಗೌಡ ಮಾತನಾಡಿ, ನಗರದ ಹೃದಯಭಾಗದಲ್ಲಿ ಆಯೋಜಿಸಲಾಗಿರುವ ಈ ಮೇಳದಲ್ಲಿ ಎಲ್ಲಾ ರೀತಿಯ ಗೊಂಬೆಗಳನ್ನು ನೋಡಬಹುದಾಗಿದೆ. ಅಲ್ಲದೆ, ನಮಗಿಷ್ಟವಾದವುಗಳನ್ನು ಖರೀದಿಸಬಹುದಾಗಿದೆ. ಇದಲ್ಲದೆ, ಹಬ್ಬಕ್ಕೆ ಬೇಕಾಗುವಂತಹ ಉಡುಪ ಹಾಗೂ ಉಡುಗೊರೆಗಳು ಇಲ್ಲಿ ಲಭ್ಯವಿವೆ. ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜನರು ಇಂತಹ ಮೇಳಕ್ಕೆ ಭೇಟಿ ನೀಡಿ ಖರೀದಿಸಬೇಕು ಎಂದು ಕರೆ ನೀಡಿದರು.
 
ಅಕ್ಟೋಬರ್‌ 8 ರಿಂದ 17 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ‌ ಇಂಡಿಯನ್‌ ಆರ್ಟಿಸನ್ಸ್‌ ಕರಕುಶಲ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಟ್ಟಿದ್ದಾಋೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments