ತಿಮ್ಮರಾಯಸ್ವಾಮಿಗೆ ವಿಶೇಷ ಪುಷ್ಪಯಾಗ; ಭಕ್ತಿಸಾಗರದಲ್ಲಿ ತೇಲಿದ ಜನ…

Webdunia
ಗುರುವಾರ, 2 ಆಗಸ್ಟ್ 2018 (20:43 IST)
ಆಷಾಢ ಮಾಸ ಹಿನ್ನೆಲೆಯಲ್ಲಿ ಆನೇಕಲ್‍ನ ಐತಿಹಾಸಿಕ ಶ್ರೀ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಪುಷ್ಪ ಯಾಗವನ್ನ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿಸಲಾಯಿತು.

10 ಕ್ಕೂ ಹೆಚ್ಚು ವಿವಿಧ ರೀತಿಯ ಸುಮಾರು 150 ಕೆಜಿ ಪುಷ್ಪಗಳನ್ನ ಬಳಸಿ ಈ ಪುಷ್ಪಯಾಗವನ್ನ ನಡೆಸಲಾಯಿತು. ಸಾಮಾನ್ಯವಾಗಿ ಭಕ್ತರು ಯಜ್ಞಗಳ ಮೂಲಕ ದೇವತೆಗಳನ್ನು ತೃಪ್ತಿಪಡಿಸುತ್ತಾರೆ. ಆದರೆ ವಿಶೇಷವಾಗಿ ಪ್ರಕೃತಿಯಲ್ಲಿ ದೊರೆಯುವ ವಿಧ ವಿಧದ ಪುಷ್ಪಗಳ ಮೂಲಕ ದೇವತೆಗಳ ಅನುಗ್ರಹವನ್ನ ಅಲ್ಲಿ ಪಡೆದುಕೊಳ್ಳಲಾಯಿತು.

ವೇದೊಕ್ತ ಮಂತ್ರ ಪುಷ್ಪಗಳಿಂದ ಪುರೋಹಿತರು, ಶ್ರೀ ತಿಮ್ಮರಾಯಸ್ವಾಮಿ ಉತ್ಸವ ಮೂರ್ತಿಗೆ ಹೂಗಳನ್ನ ಸಮರ್ಪಣೆ ಮಾಡಿದರು. ಆನೇಕಲ್‍ನ ಹಲವು ಭಕ್ತರು ಯಾಗ ಮಾಡಲು ಪುಷ್ಪಗಳನ್ನ ದೇವಾಲಯಕ್ಕೆ ನೀಡಿದ್ದರು. ಸುಮಾರು 2 ಗಂಟೆಗಳ ಕಾಲ ವೇದ ಮಂತ್ರ ಘೋಷಣೆಯೊಂದಿಗೆ ಅಪರೂಪದ ಪುಷ್ಪ ಯಾಗವನ್ನ ನಡೆಸಲಾಯಿತು. ತಿಮ್ಮರಾಯಸ್ವಾಮಿ ದೇವಾಲಯದ ಈ ಅಪರೂಪದ ವಿದ್ಯಮಾನವನ್ನ ಸಾವಿರಾರು ಜನ ಕಣ್ಣು ತುಂಬಿಕೊಳ್ಳುವ ಮೂಲಕ ದೇವರ ಕೃಪೆಗೆ ಪಾತ್ರರಾದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ: ಸರ್ಕಾರದ ವಿರುದ್ಧ ಸಿಡಿದೆದ್ದ ಹಿಂದೂಗಳು

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಮುಂದಿನ ಸುದ್ದಿ
Show comments