Publish Date: Tue, 27 Sep 2022 (11:29 IST)
Updated Date: Tue, 27 Sep 2022 (11:32 IST)
ಧಾರವಾಡ : ವಿದ್ಯಾಕಾಶಿ ಧಾರವಾಡಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಆವರು ಆಗಮಿಸಿದ್ದರು. ಐಐಐಟಿ ಉದ್ಘಾಟನೆ ಮಾಡಿದ ರಾಷ್ಟ್ರಪತಿ ಮುರ್ಮು ಅವರಿಗೆ ಸುಧಾ ಮೂರ್ತಿಯವರು ಕೌದಿ ಕೊಟ್ಟು ಗೌರವಿಸಿದ್ದಾರೆ.
ವೇದಿಕೆ ಮೇಲೆ ರಾಷ್ಟ್ರಪತಿ ಅವರಿಗೆ ಸ್ವಾಗತಿಸಿಕೊಂಡ ಸುಧಾ ಮೂರ್ತಿ ಅವರು, ಕೌದಿ ಜೊತೆ ರೇಷ್ಮೆ ಸೀರೆ ಕೂಡಾ ಕೊಟ್ಟಿದ್ದಾರೆ.
ರಾಯಚೂರಿನ ಮೂರು ಸಾವಿರ ದೇವದಾಸಿಯರು ಈ ಕೌದಿಯನ್ನ ತಯಾರು ಮಾಡಿದ್ದಾರೆ. ಇವರನ್ನು ಸಮಾಜಕ್ಕೆ ಮರಳಿ ತರುವಲ್ಲಿ ಸುಧಾ ಮೂರ್ತಿ ಸಾಕಷ್ಟು ಪ್ರಯತ್ನ ಮಾಡಿದ್ದರು.
ಆ ಪುಸ್ತಕ ಕೂಡಾ ಸುಧಾ ಮೂರ್ತಿ ಇವತ್ತು ರಾಷ್ಟ್ರಪತಿಗೆ ನೀಡಿದರು. ರಾಷ್ಟ್ರಪತಿ ಕೂಡಾ ಇವರ ಈ ಗಿಫ್ಟ್ ನೋಡಿ ಸಂತಸ ಪಟ್ಟರು ಎಂದು ಸ್ವತಃ ಸುಧಾ ಮೂರ್ತಿ ಅವರೇ ಹೇಳಿದ್ದಾರೆ.