Webdunia - Bharat's app for daily news and videos

Install App

ಕಾಶ್ಮೀರದಲ್ಲಿ ರಾಜ್ಯದ ಯೋಧ ಹುತಾತ್ಮ

Webdunia
ಬುಧವಾರ, 2 ಅಕ್ಟೋಬರ್ 2019 (19:50 IST)
ಕಾಶ್ಮೀರದಲ್ಲಿ ರಾಜ್ಯದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ತಾಲೂಕಿನ ಕರಡಿಕೊಪ್ಪ ಗ್ರಾಮದ ಯೋಧ ಮಂಜುನಾಥ ಓಲೆಕಾರ (29) ಹುತಾತ್ಮರಾಗಿದ್ದಾರೆ.
ಗಡಿಯಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ವೇಳೆ ಗುಂಡೇಟು ತಗುಲಿ ತೀವ್ರ ಗಾಯವಾಗಿತ್ತು. ಕೂಡಲೇ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಯೋಧ ಮಂಜುನಾಥ ಓಲೆಕಾರ ಮೃತಪಟ್ಟಿರುವ ಕುರಿತು ಹುಬ್ಬಳ್ಳಿಯ ಕರಡಿಕೊಪ್ಪದ ಇನಾಂವೀರಾಪುರದಲ್ಲಿಯ ಯೋಧನ ಮನೆಗೆ ಸೇನಾಧಿಕಾರಿ ಕಚೇರಿಯಿಂದ ದೂರವಾಣಿ ಕರೆ ಮಾಡಿ ಮಾಹಿತಿ ನೀಡಲಾಗಿದೆ.

ಸುಮಾರು 10 ವರ್ಷದಿಂದ ಸೇನೆಯಲ್ಲಿರುವ ಮಂಜುನಾಥಗೆ 6 ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಯೋಧನ ತಂದೆ-ತಾಯಿ ರೈತರಾಗಿದ್ದು, ಇನ್ನೊಬ್ಬ ಮಗ ಹಾಗೂ ಮಗಳೊಂದಿಗೆ ವಾಸವಾಗಿದ್ದಾರೆ. ಘಟನೆ ವಿಷಯ ಕುಟುಂಬಕ್ಕೆ ಬರಸಿಡಿಲಿನಂತೆ ಎರಗಿದ್ದು, ಮನೆಯಲ್ಲಿ ಈಗ ಕರುಳು ಕಿತ್ತುಬರುವಂಥ ಗೋಳಾಟ ಕೇಳಿಬರುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments