Select Your Language

Notifications

webdunia
webdunia
webdunia
webdunia

ಮಣ್ಣಿನಲ್ಲಿ ಮೂಡಿದ ಸಾಕಾರ ಮೂರ್ತಿ

ಮಣ್ಣಿನಲ್ಲಿ ಮೂಡಿದ ಸಾಕಾರ ಮೂರ್ತಿ
ಧಾರವಾಡ , ಮಂಗಳವಾರ, 3 ಜನವರಿ 2023 (14:47 IST)
ಧಾರವಾಡ : ಸರಳತೆಯ ಸಾಕಾರ ಮೂರ್ತಿ, ನಡೆದಾಡುವ ದೇವರು, ನಿತ್ಯ ಸಂತ ಎಂದೆಲ್ಲ ಖ್ಯಾತರಾಗಿ ನಾಡಿನ ಜನತೆಗೆ ತಮ್ಮ ಪ್ರವಚನದ ಮೂಲಕವೇ ಹತ್ತಿರವಾಗಿದ್ದ ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಪರಮಾತ್ಮನಲ್ಲಿ ಲೀನರಾಗಿದ್ದಾರೆ.

ಶ್ರೀಗಳಿಗೆ ಕಲಾವಿದ ಮಂಜುನಾಥ್ ಹಿರೇಮಠ ಅವರು ಕಲಾನಮನ ಸಲ್ಲಿಸಿದ್ದಾರೆ. ಸಿದ್ದೇಶ್ವರ ಶ್ರೀಗಳ ನೆನಪಿನಲ್ಲಿ ಧಾರವಾಡದ ಪರಿಸರ ಸ್ನೇಹಿ ಕಲಾವಿದ ಮಂಜುನಾಥ್ ಹಿರೇಮಠ, 11 ಕೆಜಿ ಜೇಡಿ ಮಣ್ಣಿನಲ್ಲಿ ಎರಡು ಅಡಿ ಎತ್ತರದ ಸಿದ್ದೇಶ್ವರ ಶ್ರೀಗಳ ಕಲಾಕೃತಿಯನ್ನು ರಚಿಸಿ ಶ್ರೀಗಳಿಗೆ ಕಲಾನಮನ ಸಲ್ಲಿಸಿದ್ದಾರೆ. 

ಸೋಮವಾರ ಸಂಜೆ ಶ್ರೀಗಳ ನಿಧನ ಸುದ್ದಿ ತಿಳಿದ ನಂತರ ಕಲಾವಿದ ಮಂಜುನಾಥ್ ಹಿರೇಮಠ ಮಣ್ಣಿನಲ್ಲಿ ಈ ಕಲಾಕೃತಿ ರಚಿಸುವ ಮೂಲಕ ಸರಳತೆಯ ಸಾಕಾರ ಮೂರ್ತಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಪಿಎಲ್ ಪಡಿತರದಾರರಿಗೆ 5 ಕೆಜಿ ಜೊತೆ 1 ಕೆಜಿ ಹೆಚ್ಚುವರಿ ಅಕ್ಕಿ ವಿತರಣೆ