Webdunia - Bharat's app for daily news and videos

Install App

ಇದೆಂತ ವಿಚಿತ್ರ ಘಟನೆ : ನೂರು ರೂ ವಿಚಾರಕ್ಕೆ ಕೊಲೆ!

Webdunia
ಶನಿವಾರ, 18 ಡಿಸೆಂಬರ್ 2021 (07:01 IST)
ಬೆಂಗಳೂರು : ಬೆಂಗಳೂರಿನಲ್ಲಿ 100 ರೂಪಾಯಿ ವಿಚಾರಕ್ಕೆ ಕೊಲೆಯಲ್ಲಿ ಅಂತ್ಯವಾಗಿದ್ದು, ಮೂರು ತಿಂಗಳ ಬಳಿಕ ಅಪಘಾತ ಪ್ರಕರಣ ಕೊಲೆ ಪ್ರಕರಣವಾಗಿ ಟ್ವಿಸ್ಟ್ ಪಡೆದುಕೊಂಡಿದೆ.

ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಕೊಲೆ ಪ್ರಕರಣ ದಾಖಲಾಗಿತ್ತು. ಈ ಮಧ್ಯೆ, ಯಶವಂತಪುರ ಸಂಚಾರ ಪೊಲೀಸರು ಅಆಖ , ಅಅಖಿಗಿ ಪ್ರಯೋಜನದಿಂದ ತಾಂತ್ರಿಕವಾಗಿ ಅಪಘಾತ ಪ್ರಕರಣದ ರಹಸ್ಯ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಕ್ಟೋಬರ್ 17 ರಂದು ಪತ್ರೀಕ್ ಮತ್ತು ಸಮಿಷ್ ಎಂಬಿಬ್ಬರ ನಡುವೆ ಗಲಾಟೆ ನಡೆದಿತ್ತು. ಅದರಲ್ಲಿ 31 ವರ್ಷದ ಪತ್ರೀಕ್ ಯಾದವ್ ಎಂಬ ವ್ಯಕ್ತಿ ಮೃತಪಟ್ಟಿದ್ದ. ಮತ್ತಿಕೆರೆ ಬಳಿ ತೂಕ ಹಾಕುವ ತಕ್ಕಡಿಯ ಬಟ್ ನಿಂದ ಪತ್ರೀಕ್ ಯಾದವ್ ತಲೆಗೆ ಸಮಿಷ್ ಹಲ್ಲೆ ಮಾಡಿದ್ದ.

ಹಲ್ಲೆ ಬಳಿಕ ವಾಪಸ್ಸು ಮನೆಗೆ ಬಂದ ಪತ್ರೀಕ್ ಗೆ ತ್ರೀವವಾಗಿ ತಲೆ ನೋವು ಕಾಣಿಸಿಕೊಂಡಾಗ ನಿಮಾನ್ಸ್ ಆಸ್ಪತ್ರೆ ಬಳಿಕ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಮನೆಯವರು ಕೇಳಿದ್ದಕ್ಕೆ ಮತ್ತಿಕೆರೆ ಬಳಿ ಸೆಲ್ಫ್ ಆಕ್ಸಿಡೆಂಟ್ ಆಗಿತ್ತು ಎಂದಿದ್ದ ಪತ್ರೀಕ್ ಯಾದವ್. ಅದರೊಂದಿಗೆ, ಸ್ನೇಹಿತರ ಜತೆ ಗಲಾಟೆ ಆಗಿರುವುದನ್ನು ಪತ್ರೀಕ್ ಯಾದವ್ ತನ್ನ ಮನೆಯವರ ಬಳಿ ಮುಚ್ಚಿಟ್ಟಿದ್ದ.

ಆದರೆ ಅಕ್ಟೋಬರ್ 20 ರಂದು ಖಾಸಗಿ ಆಸ್ಪತ್ರೆಯಲ್ಲಿ ಪ್ರತೀಕ್ ಯಾದವ್ ಕೊನೆಯುಸಿರೆಳೆದಿದ್ದ. ಆಸ್ಪತ್ರೆಯ ವತಿಯಿಂದ ಯಶವಂತಪುರ ಸಂಚಾರ ಪೊಲೀಸರಿಗೆ ಅಪಘಾತವಾದ ಬಗ್ಗೆ ಮಾಹಿತಿ ರವಾನೆಯಾಗಿತ್ತು. ಯಶವಂತಪುರ ಸಂಚಾರ ಪೊಲೀಸರು ಹೆಚ್ಚಿನ ತನಿಖೆಗಾಗಿ ಆಸ್ಪತ್ರೆಗೆ ತೆರಳಿ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡರು.

ಬಳಿಕ ಅಪಘಾತ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಸಿಸಿಟಿವಿ ಮತ್ತು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿಕೊಂಡರು. ಅದರೆ ಮೃತಪಟ್ಟ ಪತ್ರೀಕ್ ಯಾದವ್ ಹೇಳಿದ್ದಂತೆ ಆ ಸ್ಥಳದಲ್ಲಿ ಅಕ್ಟೋಬರ್ 17 ರಂದು ಯಾವುದೇ ಅಪಘಾತ ನಡೆದಿಲ್ಲ. ಇತ್ತ ಮರಣೋತ್ತರ ಪರೀಕ್ಷೆ ನಡೆಸುವಾಗ ಸಹ ವೈದ್ಯರು ಅನುಮಾನ ವ್ಯಕ್ತಪಡಿಸಿದ್ದರು. ತ್ರೀವವಾಗಿ, ಬಲವಾದ ವಸ್ತುವಿನಿಂದ ಹಲ್ಲೆಯಾಗಿ ಮೃತಪಟ್ಟಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments