Publish Date: Tue, 03 Jan 2023 (18:06 IST)
Updated Date: Tue, 03 Jan 2023 (18:08 IST)
ಡಿಸೆಂಬರ್ 31 ರಂದು ನಗರದ ಭವರ್ ಕುವಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ವಿದ್ಯಾರ್ಥಿಯು ತನ್ನ ಸ್ನೇಹಿತರೊಂದಿಗೆ ಚಹಾ ಕುಡಿಯಲು ಹೋಗಿದ್ದ ವೇಳೆ ಮಾತಿನ ಚಕಮಕಿ ನಡೆದಿದೆ. ನಂತರ ಕೆಲವು ಹುಡುಗರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದು, ಎಲ್ಲರೂ ಅಪ್ರಾಪ್ತರಾಗಿದ್ದಾರೆ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಆರು ಅಪ್ರಾಪ್ತರು ರಸ್ತೆಯನ್ನು ತಡೆದು ವ್ಯಕ್ತಿಯನ್ನು ಅಟ್ಟಾಡಿಸಿ ಕೊಂದಿದ್ದಾರೆ.