ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

Sampriya
ಭಾನುವಾರ, 16 ನವೆಂಬರ್ 2025 (17:56 IST)
Photo Credit X
ಚಿತ್ತಾಪುರ: ರಾಜ್ಯದಲ್ಲಿ ಕಳೆದೊಂದು ತಿಂಗಳಿನಿಂದ ತೀವ್ರ ಗಮನ ಸೆಳೆದಿದ್ದ ಮತ್ತು ಚರ್ಚೆಗೆ ಕಾರಣವಾಗಿದ್ದ ಆರ್‌ಎಸ್‌ಎಸ್‌ ಪಥಸಂಚಲನವು ಭಾನುವಾರ ಭಾರೀ ಪೊಲೀಸ್ ಬಿಗಿ ಭದ್ರತೆ ನಡೆ ಶಾಂತಿಯುತವಾಗಿ ಇಂದು ಸಂಪನ್ನಗೊಂಡಿತು. 

ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರ ಪಟ್ಟಣದಲ್ಲಿ 300 ಆರ್‌ಎಸ್‌ಎಸ್‌ ಗಣವೇಷಧಾರಿಗಳು ಪೊಲೀಸರ ಸರ್ಪಗಾವಲಿನ ನಡುವೆ ತನ್ನ 'ಸಂಘದ ಬಲ' ಪ್ರದರ್ಶನ ಮಾಡಿದರು. 

ಇನ್ನೂ 50 ಘೋಷ್ ವಾದಕರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಎಲ್ಲರೂ ತಮ್ಮ ಮಾಹಿತಿಯನ್ನು ನೀಡಿ ಪಥಸಂಚಲನದಲ್ಲಿ ಪಾಲ್ಗೊಂಡರು. 

ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಿಂದ ಪ್ರಾರಂಭವಾದ ಆರ್‌ಎಸ್ಎಸ್ ಪಥ ಸಂಚಲನ ವೀಕ್ಷಿಸಲು ಚಿತ್ತಾಪುರದ ರಸ್ತೆಗಳ ಇಕ್ಕೆಲಗಳಲ್ಲಿ ಜನತೆ ಕಿಕ್ಕಿರಿದು ಸೇರಿದ್ದರು.

ನೆರೆದಿದ್ದ ನೂರಾರು ಮಂದಿ 'ಭಾರತ ಮಾತಾಕೀ ಜೈ', 'ವಂದೇ ಮಾತರಂ' 'ಜೈ ಶ್ರೀರಾಮ', 'ಜೈ ಭವಾನಿ, ಜೈ ಶಿವಾಜಿ' ಎಂದು ಘೋಷಣೆ ಮೊಳಗಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments