Webdunia - Bharat's app for daily news and videos

Install App

ಅಗಲಿದ ನಾಯಕರಿಗೆ ಅಧಿವೇಶನದಲ್ಲಿ ಅಶ್ರುತರ್ಪಣ

geetha
ಸೋಮವಾರ, 26 ಫೆಬ್ರವರಿ 2024 (19:21 IST)
ಬೆಂಗಳೂರು :ಹಿರಿಯ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಸದನದಲ್ಲಿ ಶೃದ್ಧಾಂಜಲಿ ಸಲ್ಲಿಸಲಾಯಿತು. ಡಿಸಿಎಂ ಡಿ.ಕೆ. ಶಿವಕುಮಾರ್‌ , ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ , ಸಚಿವ ಜಮೀರ್‌ ಅಹ್ಮದ್‌, ಸಚಿವ ಪ್ರಿಯಾಂಕ್‌ ಖರ್ಗೆ,ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ರಾಜಾ ವೆಂಕಟಪ್ಪ ನಾಯಕರ ಅಗಲಿಕೆಗೆ ವಿಷಾದ ವ್ಯಕ್ತಪಡಿಸಿದರು. 
 
ಸಿಎಂ ಸಿದ್ದರಾಮಯ್ಯ ಮಾತನಾಡಿ, ನಮ್ಮ ಸದನದ ಸದಸ್ಯರಾದ ರಾಜಾ ವೆಂಕಟಪ್ಪ ನಾಯಕರನ್ನು ಕಳೆದುಕೊಂಡಿರುವುದು ನಮ್ಮ ಕುಟುಂಬದ ಸದಸ್ಯರೊಬ್ಬರನ್ನು ಕಳೆದಕೊಂಡಂತಾಗಿದೆ. ಅವರು ಗಳಿಸಿದ್ದ ಜನಪ್ರೀತಿ, ಅವರ ಸರಳತೆ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ ಎಂದರು.

ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾತನಾಡಿ, ಅವರು ರಾಜ ಮನೆತನದವರಾಗಿದ್ದರೂ ಸಹ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಮನೆತನದ ಹಿನ್ನೆಲೆ ಹೊಂದಿದ್ದರು. ಅವರ ಸಾವಿನಿಂದ ಅಭಿಮಾನಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಜಾತಶತ್ರುವೆಂದೇ ಅವರು ಹೆಸರಾಗಿದ್ದರು ಎಂದು ವಿಷಾದಿಸಿದರು. ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಮಾತನಾಡಿ, ರಾಜಾ ವೆಂಕಟಪ್ಪ ನಾಯಕರ ಅವರ ಅಗಲಿಕೆಯನ್ನು ಈಗಲೂ ನಂಬಲು ಸಾಧ್ಯವಾಗುತ್ತಿಲ್ಲ. ಅವರ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments