Webdunia - Bharat's app for daily news and videos

Install App

ಮದುವೆಯಾದ ಒಂದೇ ವರ್ಷಕ್ಕೆ ಆತ್ಮಹತ್ಯೆಗೆ ಶರಣಾದ ಟೆಕ್ಕಿ!

Webdunia
ಗುರುವಾರ, 24 ನವೆಂಬರ್ 2022 (10:45 IST)
ಬೆಂಗಳೂರು : ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿಯೊಬ್ಬಳು ಮದುವೆಯಾದ ಒಂದೇ ವರ್ಷಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ರಿಚರ್ಡ್ ಗಾರ್ಡನ್ನಲ್ಲಿ ನಡೆದಿದೆ.

ಐಟಿ ಉದ್ಯಮಿ ಆಗಿರುವ ಶ್ವೇತಾ (27) ನ.10ರಂದು ನೇಣಿಗೆ ಶರಣಾಗಿದ್ದಾಳೆ. ಐಬಿಎಂ ಕಂಪನಿಯ ಉದ್ಯೋಗಿಯಾಗಿದ್ದ ಶ್ವೇತಾ 11 ತಿಂಗಳ ಹಿಂದಷ್ಟೇ ಟಿಸಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಎಂಬಾತನೊಂದಿಗೆ ವಿವಾಹವಾಗಿದ್ದಳು.

ಆದರೆ ಮದುವೆಗೂ ಮುನ್ನ ಅಭಿಷೇಕ್ಗೆ ಯುವತಿಯೊಬ್ಬಳೊಂದಿಗೆ ಸಂಬಂಧವಿತ್ತು ಎನ್ನುವ ವಿಷಯವು ಶ್ವೇತಾಳಿಗೆ ಮದುವೆಯಾದ ಬಳಿಕ ತಿಳಿದಿದೆ. ಈ ವಿಚಾರ ಗೊತ್ತಾದ ಬಳಿಕ ಶ್ವೇತಾ ಹಾಗೂ ಅಭಿಷೇಕ್ ಮಧ್ಯೆ ಪ್ರತಿನಿತ್ಯ ಜಗಳವಾಗುತ್ತಿತ್ತು.

ಅದಾದ ಬಳಿಕ ಪರಸ್ಪರ ರಾಜಿ ಪಂಚಾಯತಿ ನಡೆದಿತ್ತು. ಆ ನಂತರ ಅಭಿಷೇಕ್ ಹಾಗೂ ಶ್ವೇತಾ ಇಬ್ಬರೂ ಒಟ್ಟಿಗೆ ಜೀವನ ಸಾಗಿಸುತ್ತಿದ್ದರು. ಈ ನಡುವೆ ಅಭಿಷೇಕ್ ತನ್ನ ಹಳೆಯ ಚಾಳಿಯನ್ನೇ ಪುನಃ ಮುಯಂದುವರಿಸಿದ್ದಾನೆ. ಇದರಿಂದಾಗಿ ಬೇಸತ್ತ ಶ್ವೇತಾ ನೇಣಿಗೆ ಶರಣಾಗಿದ್ದಾಳೆ ಎಂಬ ಆರೋಪಗಳು ಮೃತ ಶ್ವೇತಾಳ ಕುಟುಂಬದಿಂದ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments