Publish Date: Sat, 11 Mar 2023 (14:46 IST)
Updated Date: Sat, 11 Mar 2023 (15:07 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಡಕ್ಕೆ ಸಿಲುಕಿಸುವ ಕಾಂಗ್ರೆಸ್ ರಣತಂತ್ರಕ್ಕೆ ತಾತ್ಕಾಲಿಕ ಹಿನ್ನಡೆಯಾಗಿದೆ.
ಹಾವೇರಿಯ ಶಿಗ್ಗಾವಿಯಲ್ಲಿ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಪಂಚಮಸಾಲಿ ಅಸ್ತ್ರ ಬಳಸಲು ಮುಂದಾಗಿತ್ತು. ಆರಂಭದಲ್ಲಿ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಲು ಸಿದ್ಧ ಎಂದಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಈಗ ಹೊಸ ಷರತ್ತು ಹಾಕಿದ್ದಾರೆ ಎನ್ನಲಾಗಿದೆ.
ವಿನಯ್ ಕುಲಕರ್ಣಿ ಅವರ ಈ ಪಟ್ಟಿಗೆ ಕಾಂಗ್ರೆಸ್ ನಾಯಕರು ನೀಡುವ ಭರವಸೆಯ ಮೇಲೆ ಬಸವರಾಜ್ ಬೊಮ್ಮಾಯಿ ವಿರುದ್ಧ ಆಪರೇಷನ್ ಪಂಚಮಸಾಲಿ ನಡೆಯುತ್ತಾ ಇಲ್ಲವಾ ಎನ್ನುವುದು ತಿಳಿಯಲಿದೆ.