Select Your Language

Notifications

webdunia
webdunia
webdunia
webdunia

ಭೀಕರ ರಸ್ತೆ ಅಪಘಾತ, 8 ಮಂದಿ ಬಲಿ

ಭೀಕರ ರಸ್ತೆ ಅಪಘಾತ, 8 ಮಂದಿ ಬಲಿ
bangalore , ಶನಿವಾರ, 21 ಮೇ 2022 (19:56 IST)
ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 8 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಧಾರವಾಡದಲ್ಲಿ ನಡೆದಿದೆ.ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದು, 6 ಜನರ ಸ್ಥಿತಿ ಗಂಭೀರವಾಗಿದೆ..ನಿಗದಿ ಗ್ರಾಮದ ಯುವಕನ ನಿಶ್ಚಿತಾರ್ಥ ಮುಗಿಸಿಕೊಂಡು ಬೆನಕಟ್ಟಿಗೆ ವಾಪಸ್ ಬರುವಾಗ ಈ ಅನಾಹುತ ಸಂಭವಿಸಿದ್ದು, ಅನನ್ಯಾ, ಹರೀಶ್, ಶಿಲ್ಪಾ, ನೀಲವ್ವ, ಮಧುಶ್ರೀ, ಮಹೇಶ್ವರಯ್ಯ, ಶಂಭುಲಿಂಗಯ್ಯ ಮೃತ ದುರ್ದೈವಿಗಳಾಗಿದ್ದಾರೆ..ಕ್ರೂಸರ್ ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ..ಸಂಭ್ರಮದ ಬದಲಿಗೆ ಮದುವೆ ನಡೆಯಬೇಕಾದ ಸ್ಥಳದಲ್ಲಿ ಸ್ಮಶಾನದ ಮೌನ ಆವರಿಸಿದೆ. ಅಪಘಾತ ಸ್ಥಳಕ್ಕೆ ಎಸ್​​ಪಿ ಕೃಷ್ಣಕಾಂತ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದ್ವಿಚಕ್ರ ವಾಹನಗಳ ಡಿಕ್ಕಿ, ನಾಲ್ವರ ಸಾವು