ಮೊಬೈಲ್​ ಟವರ್​ಗಳಲ್ಲಿ ಇರುವ ಚಿಪ್​ ಕದಿಯುತ್ತಿದ್ದ ಕಳ್ಳ

Webdunia
ಸೋಮವಾರ, 4 ಅಕ್ಟೋಬರ್ 2021 (21:07 IST)
ಬೆಂಗಳೂರು: ಮೊಬೈಲ್​ ಟವರ್​ಗಳಲ್ಲಿ ಇರುವ ಚಿಪ್​ ಕದಿಯುತ್ತಿದ್ದ ಕಳ್ಳನನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 25 ಲಕ್ಷ ರೂ. ಮೌಲ್ಯದ 19 ಮೊಬೈಲ್ ಟವರ್ ಚಿಪ್ ವಶಕ್ಕೆ ಪಡೆಯಲಾಗಿದೆ.
ಗಂಗಾಧರ್​ ಬಂಧಿತ ಆರೋಪಿ.
ಖಾಸಗಿ ಮೊಬೈಲ್ ಕಂಪೆನಿಯಲ್ಲಿ ಸೈಟ್ ಇಂಜಿನಿಯರ್ ಆಗಿದ್ದ ಗಂಗಾಧರ್ ಕದ್ದ ಚಿಪ್​ಗಳನ್ನು ಅಕ್ರಮವಾಗು ಮಾರುತ್ತಿದ್ದ ಎಂದು ತಿಳಿದುಬಂದಿದೆ.
ಗಂಗಾಧರ್ ಮೊಬೈಲ್ ಟವರ್​ಗಳಿಗೆ ಹೋಗಿ ಬೆಲೆಬಾಳುವ ಚಿಪ್ ಗಳನ್ನ ಕಳ್ಳತನ ಮಾಡುತಿದ್ದ. ಈ ಬಗ್ಗೆ ಮೊಬೈಲ್ ಕಂಪೆನಿಯವರು ಪೀಣ್ಯ ಠಾಣೆಗೆ ದೂರನ್ನು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಟೆಲಿಕಾಂ ಕಂಪನಿಯ ಟವರ್​ಗಳ ಮ್ಯಾನೇಜ್ ಕೆಲಸ ನಿರ್ವಹಿಸುವ ಕಂಪನಿಯಲ್ಲಿ ಕೆಲಸಕ್ಕಿದ್ದ ಗಂಗಾಧರ್ ಟವರ್​ಗಳ ಸಂಪೂರ್ಣ ಮಾಹಿತಿ ಹೊಂದಿದ್ದ. ಕೆಲಸ ಕಳೆದುಕೊಂಡ ಬಳಿಕ ಹಣವಿಲ್ಲದೇ ಪರದಾಟ ಪಟ್ಟಿದ್ದ. ಬಳಿಕ ಈ ಕೃತ್ಯಕ್ಕೆ ಕೈ ಹಾಕಿದ್ದ ಎಂದು ಮಾಹಿತಿ ಲಭ್ಯವಾಗಿದೆ. ಪೀಣ್ಯ, ಕೊಣನಕುಂಟೆ, ಪುಲಕೇಶಿನಗರ ಸೇರಿದಂತೆ ಕನಕಪುರದಲ್ಲೂ ಚಿಪ್ ಕಳ್ಳತನ ಮಾಡಿದ್ದ ಎನ್ನಲಾಗಿದೆ. ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಒಟ್ಟು 9 ಪ್ರಕರಣ ಪತ್ತೆಯಾಗಿದೆ. ಪೀಣ್ಯ ಪೊಲೀಸರು ಆರೋಪಿಯ ವಿಚಾರಣೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಹಿಂದಿನ ಶಂಕಿತೆ ದೇಶದಿಂದ ಪಲಾಯನಕ್ಕೆ ಸ್ಕೆಚು, ಬಯಲಾಗಿದ್ದು ಹೇಗೇ ಗೊತ್ತಾ

ರಾಣಿ ಚನ್ನಮ್ಮ ಮೃಗಾಲಯದಲ್ಲಿ ಇದೆಂಥಾ ಘಟನೆ, ಕೃಷ್ಣಮೃಗಗಳಿಗೆ ಆಗಿದ್ದಾದರೂ ಏನು

ಮತಗಳ್ಳತನ ಚುನಾವಣೆ ತಂತ್ರ, ರಾಹುಲ್ ಗಾಂಧಿ ವಿದೇಶದಲ್ಲಿ ಕಾಫಿ ಕುಡಿಯುತ್ತಿದ್ದರು: ಯದುವೀರ್ ಒಡೆಯರ್

ಜಮ್ಮು ಕಾಶ್ಮೀರದ ನೌಗಮ್ ಠಾಣೆಯಲ್ಲಿ ಸ್ಫೋಟ, ಆಗಿದ್ದೇನು ಗೊತ್ತಾ

ಬಿಜೆಪಿ ಗೆದ್ದರೆ ಮತಗಳ್ಳತನ, ಕಾಂಗ್ರೆಸ್ ಗೆದ್ದರೆ ಎಲ್ಲಾ ಚೆನ್ನಾಗಿರುತ್ತಾ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments