Webdunia - Bharat's app for daily news and videos

Install App

ಕಂಡಕ್ಟರ್‌ ಸಮಯಪ್ರಜ್ಞೆಗೆ ತಪ್ಪಿದ ದುರಂತ

Webdunia
ಭಾನುವಾರ, 6 ಆಗಸ್ಟ್ 2023 (14:02 IST)
ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣ ಹೊರವಲಯದ ಸಾಯಿಬಾಬ ದೇವಾಲಯ ಹತ್ತಿರ ಶಾರ್ಟ್‌ ಸರ್ಕ್ಯೂಟ್‌ನಿಂದ ಲಾರಿ ಹೊತ್ತಿ ಉರಿದಿದೆ. ಬಾಗಲಕೋಟೆ ಸಿಮೆಂಟ್‌ ಫ್ಯಾಕ್ಟರಿಯಿಂದ ತೋರಣಗಲ್ಲಿಗೆ ಜಲ್ಲಿ ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಕೂಡಲೇ ರಸ್ತೆ ಬದಿಗೆ ಲಾರಿ ನಿಲ್ಲಿಸಿ ಕೆಳಗೆ ಜಿಗಿದಿದ್ದಾನೆ. ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಶಹಾಪುರ - ಇಳಕಲ್‌ ಬಸ್‌ನಲ್ಲಿದ್ದ ನಿರ್ವಾಹಕಿ ಶರಣಮ್ಮ ಗೌಡರ ಈ ದೃಶ್ಯ ಕಂಡು ತಕ್ಷಣ ಅಗ್ನಿಶಾಮಕದಳಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಲಾರಿ ಕ್ಯಾಬಿನ್‌ ಸಂಪೂರ್ಣ ಸುಟ್ಟಿದ್ದು , ಡಿಸೇಲ್‌ ಟ್ಯಾಂಕ್‌ಗೆ ಬೆಂಕಿ ತಗಲುತ್ತಿದ್ದ ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದರು. ಇದರಿಂದ ದೊಡ್ಡ ಅನಾಹುತ ತಪ್ಪಿಹೋಗಿದೆ. ಬಸ್ ನಿರ್ವಾಹಕಿ ಶರಣಮ್ಮನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments