Webdunia - Bharat's app for daily news and videos

Install App

ಮುರುಘಾಶ್ರೀ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್..!

Webdunia
ಭಾನುವಾರ, 4 ಸೆಪ್ಟಂಬರ್ 2022 (19:31 IST)
ಪೋಕ್ಸೋ ಕೇಸ್​​ನಲ್ಲಿ ಮುರುಘಾ ಶರಣರ ಬಂಧನ ವಿಚಾರಕ್ಕೆ ಸಂಬಂಧಿಸಿ ಮುರುಘಾ ಸ್ವಾಮೀಜಿ ಪ್ರಕರಣದಲ್ಲಿ ಸಾಕ್ಷ್ಯನಾಶವಾಗಿದೆ. ಕೇಸ್​​ ಸಾಕ್ಷ್ಯ ನಾಶಕ್ಕೆ ಸರ್ಕಾರವೇ ಅವಕಾಶ ಕೊಟ್ಟಂತಿದೆ ಎಂದು ಮೈಸೂರಿನಲ್ಲಿ ಬಿಜೆಪಿ ಎಂಎಲ್​ಸಿ ಹೆಚ್​​.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ
 
ಮಕ್ಕಳ ಹಾಸ್ಟೆಲ್​ ಬೆಡ್​ಶೀಟ್​​ಗಳೆಲ್ಲವೂ ಬದಲಾಗಿದೆ. ಒಡನಾಡಿಯ ಪರಶು ಸ್ಟ್ಯಾನ್ಲಿ ಅವರ ಕಾರ್ಯ ಶ್ಲಾಘನೀಯ. ಒಡನಾಡಿಯ ಪರಶು ಸ್ಟ್ಯಾನ್ಲಿಗೆ ಬೆದರಿಕೆ ಶುರುವಾಗಿದೆ. ಯಾವುದೇ ಆಮಿಷ, ಧಮ್ಕಿಗೆ ಹೆದರದೇ ಅವರು ಕೆಲಸ ಮಾಡಿದ್ದಾರೆ. ಆದರೆ ಕೇಸ್​​ ಸಾಕ್ಷ್ಯ ನಾಶಕ್ಕೆ ಸರ್ಕಾರವೇ ಅವಕಾಶ ಕೊಟ್ಟಂತಿದೆ. ಶ್ರೀಗಳ ಕೇಸ್​ನಲ್ಲಿ ಪೊಲೀಸರಿಂದ ಕರ್ತವ್ಯ ಲೋಪ ಆಗಿದೆ. ಕೇಸ್​ ಸಂಬಂಧ ಚಿತ್ರದುರ್ಗ ಎಸ್​ಪಿ ಅಮಾನತು ಮಾಡಬೇಕು ಎಂದು ಹೆಚ್​​.ವಿಶ್ವನಾಥ್​​ ಆಗ್ರಹಿಸಿದ್ದಾರೆ
 
 
ಮಂತ್ರಿಗಳಿಗೆ ತಲೆ ಇದೆಯಾ? ಇವರೇನು ಜಡ್ಜ್​ಗಳಾ? ಸ್ವಾಮೀಜಿ ಪರ ಮಾತನಾಡುವುದನ್ನು ಮೊದಲು ಬಂದ್ ಮಾಡಿ. ಸಚಿವರು, ಮಾಜಿ ಸಚಿವರಿಗೆ ಏನು ಬಂದಿದೆಯೋ ಗೊತ್ತಿಲ್ಲ. ಸ್ವಾಮೀಜಿ ಪರ ಮಾತನಾಡದಂತೆ ಕೇಂದ್ರ ನಾಯಕರ ಸೂಚನೆ ಇದೆ. ಸ್ವಾಮೀಜಿ ಮಠದ ಕುಲಕ್ಕೆ ಅವಮಾನ, ಸಂಸಾರಿಗಳೇ ಮಠಾಧೀಶರಾಗಲಿ. ನಮ್ಮಲ್ಲಿ ಸಾಕಷ್ಟು ಪೀಠಾಧಿಪತಿಗಳಿದ್ದಾರೆ, ಆದರೆ ಬ್ರಹ್ಮಚಾರಿಗಳಿಲ್ಲ. ಮಕ್ಕಳ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಸ್ವಾಮೀಜಿಗಳಿಂದ ಏನೂ ಆಗಿಲ್ಲ, ಸ್ವಾಮೀಜಿಯಿಂದ ನಾಡಿಗೆ ಕಂಟಕ ಎಂದು ಸ್ವಾಮೀಕಿ ಪರ ಮಾತನಾಡಿದ ಸಚಿವರ ವಿರುದ್ಧ ಹೆಚ್​​.ವಿಶ್ವನಾಥ್​​ ಕಿಡಿಕಾರಿದ್ದಾರೆ. ಸರ್ಕಾರ ಮಠಕ್ಕೆ ಹಣ ಕೊಟ್ಟಿದ್ದು ಇದಕ್ಕೇನಾ? ಅಪ್ರಾಪ್ತ ಮಕ್ಕಳು ಸುಳ್ಳು ಹೇಳುವುದಿಲ್ಲ. ಮಕ್ಕಳು ಅಮಾಯಕರು ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಸ್ವಾಮಿಜಿಯಿಂದ ಆಗಿರುವ ಕಳಂಕವನ್ನು ತೊಳೆದುಕೊಳ್ಳಬೇಕು. ಪೊಲೀಸರಿಂದ ಕರ್ತವ್ಯ ಲೋಪವಾಗಿದೆ ಎಂದರು.
 
ಜಗದ್ಗುರುಗಳು ಯಾರೂ ಇಲ್ಲ, ಎಲ್ಲರೂ ಜಾತಿ ಗುರುಗಳೇ ಇದ್ದಾರೆ. ಇವರಿಗೆ ತಮ್ಮ ಜಾತಿ, ಧರ್ಮ ಕಾಪಾಡುತ್ತೇ ಅನ್ನೋದೆ ಧೈರ್ಯ. ಆದರೆ ಇವರೆಲ್ಲರಿಗಿಂತ ಕಾನೂನು ದೊಡ್ಡದು. ಅಪರಾಧಿ ಪರ ಮಾತಾಡಿದವರನ್ನು ಪ್ರಕರಣದಲ್ಲಿ ಸೇರಿಸಬೇಕು. ಪೀಠಾಧಿಪತಿಗಳು ಬಹುತೇಕರು ಬ್ರಹ್ಮಚಾರಿಗಳ ವೇಷದಲ್ಲಿದ್ದಾರೆ. ಇನ್ಮುಂದೆ ಮಠಗಳಿಗೆ ಸಂಸಾರಿಗಳೇ ಪೀಠಾಧಿಪತಿಯಾಗಲಿ. ಧರ್ಮಸ್ಥಳವೇ ಇದಕ್ಕೆ ಉದಾಹರಣೆಯಾಗಲಿ ಎಂದರು.
 
ಇನ್ನು ಮತ್ತೊಂದು ಕಡೆ ಚಿತ್ರದುರ್ಗ ಮುರುಘಾ ಮಠದಲ್ಲಿ ಪೊಲೀಸರಿಂದ ಸ್ಥಳ ಮಹಜರು ಮಾಡಲಾಗುತ್ತಿದೆ. ಮುರುಘಾ ಶ್ರೀಗಳು ಕೂರುತ್ತಿದ್ದ ಕಚೇರಿಯಲ್ಲಿ, ಶ್ರೀಗಳ ಬೆಡ್​ರೂಮ್​ನಲ್ಲಿ ಮಹಜರು ಮಾಡಿಲಾಗುತ್ತಿದೆ. ಪ್ರಕರಣದ ತನಿಖಾಧಿಕಾರಿ DySP ಅನಿಲ್ ಕುಮಾರ್ ಹಾಗೂ ಎಸ್​ಪಿ ಕೆ.ಪರಶುರಾಮ ನೇತೃತ್ವದಲ್ಲಿ ಮಹಜರು ಕಾರ್ಯ ನಡೆಯುತ್ತಿದೆ. ದರ್ಬಾರ್ ಹಾಲ್​ನಲ್ಲಿಯೂ ಮುರುಘಾ ಶ್ರೀಗಳಿಂದ ಮಹಜರು ಮಾಡಿ ಸಾಕಷ್ಟು ಮಾಹಿತಿ ಕಲೆ ಹಾಕುವಲ್ಲಿ ಪೊಲೀಸರ ಪ್ರಯತ್ನ ನಡೆಯುತ್ತಿದೆ. ಆದ್ರೆ ಪೊಲೀಸರ ಎಲ್ಲಾ ಪ್ರಶ್ನೆಗಳಿಗೂ ಮುರುಘಾಶ್ರೀಗಳು ಮೌನ ವಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments