ಪ್ರಧಾನಿ ಮೋದಿಯಿಂದ ಎರಡು ದಿನಗಳ ಕಾಲ ಪ್ರವಾಸ

Webdunia
ಗುರುವಾರ, 1 ಸೆಪ್ಟಂಬರ್ 2022 (21:34 IST)
ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕೇರಳ ಪ್ರವಾಸ ನಡೆಯಲಿದೆ, ಸಂಜೆ ಕೊಚ್ಚಿ ಮೆಟ್ರೋ ಹಂತ-2 ಯೋಜನೆ ಶಂಕುಸ್ಥಾಪನೆ ನೆರವೇರಿಸಿದರು. ಇದರ ಜೊತೆಗೆ ಮೊದಲನೇ ಉದ್ಘಾಟನಾ ಕಾರ್ಯಕ್ರಮದ ಜೊತೆಗೆ ಅವರು ಭಾಗವಹಿಸಲಿದ್ದಾರೆ. ಮುಖ್ಯವಾಗಿ ಭಾರತದಲ್ಲಿ ಮೊದಲ ಬಾರಿಗೆ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಯುದ್ಧನೌಕೆ ಐಎನ್‌ಎಸ್‌ ವಿಕ್ರಾಂತ್‌ ಅನ್ನು ಪ್ರಧಾನಿ ನಾಳೆ ಲೋಕಾರ್ಪಣೆ ಮಾಡುತ್ತಾರೆ. ಭಾರತೀಯ ನೌಕಾಪಡೆಯ ಆಂತರಿಕ ಯುದ್ಧನೌಕೆ ವಿನ್ಯಾಸ ಬ್ಯೂರೋ ವಿನ್ಯಾಸಗೊಳಿಸಿದ ಮತ್ತು ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವಾಲಯದ ಅಡಿಯಲ್ಲಿ ಸಾರ್ವಜನಿಕ ವಲಯದ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ವಿಕ್ರಾಂತ್ ನಿರ್ಮಿಸಲಾಗಿದೆ. 45 ಸಾವಿರ ಟನ್ ಭಾರ ಇರುವ ವಿಕ್ರಾಂತ್ ಯುದ್ಧ ವಿಮಾನ ವಾಹಕ ಸುಮಾರು 20 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ಧವಾಗಿದೆ. ಸುಮಾರು 12,500 ಚದರ ಮೀಟರ್ ವ್ಯಾಪ್ತಿ ಹೊಂದಿದೆ. ಇದಕ್ಕೆ 6 ಹೆಲಿಕಾಪ್ಟರ್ ಮತ್ತು 12 ಫೈಟರ್‌ಜೆಟ್ ಹೊರುವ ಸಾಮರ್ಥ್ಯವಿದೆ. ಇಂದು ಸಂಜೆ 6 ಗಂಟೆಗೆ ಕೇರಳಕ್ಕೆ ಆಗಮಿಸಲಿರುವ ನರೇಂದ್ರ ಮೋದಿ ಕೊಚ್ಚಿನ್ ವಿಮಾನ ನಿಲ್ದಾಣದ ಬಳಿಯ ಕಾಲಟಿ ಗ್ರಾಮದಲ್ಲಿರುವ ಆದಿ ಶಂಕರಾಚಾರ್ಯರ ಜನ್ಮಸ್ಥಳವಾದ ಆದಿಶಂಕರ ಜನ್ಮಭೂಮಿ ಕ್ಷೇತ್ರಕ್ಕೆ ಭೇಟಿ ನೀಡುವರು. ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments