Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯ ಐತಿಹಾಸಿಕ ಉದ್ಯಾನವನಕ್ಕೂ ಕಾಲಿಟ್ಟ ವಕ್ಫ್‌: ಆರ್‌ ಅಶೋಕ್‌ ಕಿಡಿ

Sampriya
ಗುರುವಾರ, 14 ನವೆಂಬರ್ 2024 (15:55 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನವರೇ ವಕ್ಫ್ ಮಂಡಳಿ ಹೆಸರಿನಲ್ಲಿ ನಡೆಯುತ್ತಿರುವ ದಬ್ಬಾಳಿಕೆಗೆ ಶೀಘ್ರವೇ ಅಂತ್ಯ ಹಾಡದಿದ್ದರೆ, ಜನ ನಿಮ್ಮ ಸರ್ಕಾರದ ವಿರುದ್ಧ ದಂಗೆ ಏಳುವ ದಿನ ದೂರವಿಲ್ಲ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಇದೀಗ ವಕ್ಫ್‌ ಆಸ್ತಿ ವಿವಾದ ಭಾರೀ ಸದ್ದು ಮಾಡುತ್ತಿದ್ದು, ಇದೀಗ ವಕ್ಫ್ ಭೂತ ನಗರದ ಐತಿಹಾಸಿಕ ಲಾಲ್‌ಬಾಗ್ ಉದ್ಯಾನವನದ ಮೇಲೂ ಬಿದ್ದಿದೆ.

ಈ ಬಗ್ಗೆ ಆಕ್ರೋಶ ಹೊರಹಾಕಿ ವಿಪಕ್ಷ ನಾಯಕ ಆರ್‌ ಅಶೋಕ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.

ನಾಡಪ್ರಭು ಕೆಂಪೇಗೌಡರು ಕಟ್ಟಿದ ಚಿಕ್ಕಪೇಟೆ ಬಳೇ ಪೇಟೆ, ಕಾಟನ್ ಪೇಟೆ ಅವರದ್ದು ಅಂದಿದ್ದಾಯ್ತು, ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್ ಅವರದ್ದು ಅಂದಿದ್ದಾಯ್ತು, ಈಗ ಲಾಲ್ ಬಾಗ್ ಉದ್ಯಾನವನವೂ ಅವರದ್ದೇ ಅಂತೆ.

ಸಿಎಂ ಸಿದ್ದರಾಮಯ್ಯನವರೇ ವಕ್ಫ್ ಮಂಡಳಿ ಹೆಸರಿನಲ್ಲಿ ನಡೆಯುತ್ತಿರುವ ಈ ದಬ್ಬಾಳಿಕೆಗೆ ಶೀಘ್ರವೇ ಅಂತ್ಯ ಹಾಡದಿದ್ದರೆ, ಜನ ನಿಮ್ಮ ಸರ್ಕಾರದ ವಿರುದ್ಧ ದಂಗೆ ಏಳುವ ದಿನ ದೂರವಿಲ್ಲ. ಇನ್ನಾದರೂ ಈ ಓಲೈಕೆ ರಾಜಕಾರಣ ಬಿಡಿ. ನಿಮ್ಮನ್ನ ನಂಬಿ ಮತ ನೀಡಿರುವ ನಾಡಿನ ಜನಸಾಮಾನ್ಯರ ಆಸ್ತಿ-ಪಾಸ್ತಿ ಉಳಿಸುವ ಮೂಲಕ ಅವರ ಋಣ ತೀರಿಸಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments