Webdunia - Bharat's app for daily news and videos

Install App

ಸಿನಿಮಿಯ ಶೈಲಿಯಲ್ಲಿ ಮಹಿಳೆಯೊಬ್ಬಳ ಸರಗಳವು

Webdunia
ಶನಿವಾರ, 9 ಅಕ್ಟೋಬರ್ 2021 (21:35 IST)
ಮಹಿಳೆಯೊಬ್ಬರ ಸರಗಳವು ಮಾಡಿ ಪರಾರಿಯಾಗುತ್ತಿದ್ದ ಆರೋಪಿಬ್ಬನನ್ನು ಸಿನಿಮಿಯ ಶೈಲಿಯಲ್ಲಿ ಆಟೋ ಚಾಲಕರೊಬ್ಬರು ಸುಮಾರು ಎರಡು ಕಿ.ಮೀಟರ್ ಹಿಂಬಾಲಿಸಿ ಹಿಡಿದು ಪೆÇಲೀಸರಿಗೊಪ್ಪಿಸಿರುವ ಘಟನೆ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದಾಬಸಪೇಟೆ ನಿವಾಸಿ ಕೇಶವಮೂರ್ತಿ(31) ಬಂಧಿತ. ಆರೋಪಿಯಿಂದ 40 ಸಾವಿರ ರೂ. ಮೌಲ್ಯದ 9.5 ಗ್ರಾಂ ಚಿನ್ನದ ಸರ ವಶಕ್ಕೆ ಪಡೆಯಲಾಗಿದೆ ಎಂದು ಪೆÇಲೀಸರು ತಿಳಿಸಿದರು. 
 ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವ ಆಟೋ ಚಾಲಕ ರುದ್ರೇಶ್ ಎಂಬವರು ಖದೀಮ ಕೇಶವಮೂರ್ತಿಯನ್ನು ಸುಮಾರು 2 ಕಿ.ಮೀಟರ್ ಹಿಂಬಾಲಿಸಿ ಹಿಡಿದು ಪೆÇಲೀಸರಿಗೊಪ್ಪಿಸಿದ್ದಾರೆ. ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಚಿಕ್ಕಬಾಣವಾರ ನಿವಾಸಿ ಪುಷ್ಪ(32) ಎಂಬವರು ಪಕ್ಕದ ಮನೆಯ ಮಹಿಳೆಯೊಬ್ಬರ ಜತೆ ತಮ್ಮ ಒಂದು ವರ್ಷದ ಮಗು ಕರೆದುಕೊಂಡು ಸಮೀಪದಲ್ಲಿರುವ ದುರ್ಗಾಪರಮೇಶ್ವರಿ ದೇವಾಲಯಕ್ಕೆ ನಡೆದುಕೊಂಡು ಹೋಗಿದ್ದರು. ಇವರು ವಾಪಸ್ ಬರುವ ವೇಳೆ ಹಿಂದಿನಿಂದ ಬಂದ ಆರೋಪಿ, ಪುಷ್ಪ ಅವರ ಚಿನ್ನದ ಸರ ಕಸಿದುಕೊಂಡಿದ್ದಾನೆ. ಆ ವೇಳೆ ಮಹಿಳೆ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಆರೋಪಿ, ಮಗುವಿನ ಸಮೇತ ಮಹಿಳೆಯನ್ನು ತಳ್ಳಿ ಸರ ಕಿತ್ತುಕೊಂಡು ಹೋಗಿದ್ದಾನೆ. ಅದರಿಂದ ಮಹಿಳೆಯ ಕೈ, ಕುತ್ತಿಗೆ ಭಾಗದಲ್ಲಿ ಗಾಯಗಳಾಗಿವೆ.
ಈ ಮಧ್ಯೆ ಆರೋಪಿ ಓಡುವಾಗ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಅಲ್ಲೇ ಇದ್ದ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವ ಆಟೋ ಚಾಲಕ ರುದ್ರೇಶ್ ಅವರು ಆರೋಪಿಯನ್ನು ಸುಮಾರು ಎರಡು ಕಿ.ಮೀಟರ್ ಹಿಂಬಾಲಿಸಿದ್ದಾರೆ. ಆಗ ಆರೋಪಿ ಬಡಿಗೆಯಿಂದ ರುದ್ರೇಶ್ ಮೇಲೆ ಹಲ್ಲೆ ನಡೆಸಿದ್ದಾನೆ. ಆದರೂ ಬಿಡದ ರುದ್ರೇಶ್ ಆರೋಪಿಯನ್ನು ಹಿಡಿದು ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪಿಎಸ್‍ಐ ಎಂ.ಜೆ.ಶಿವರಾಜು ಮತ್ತು  ತಂಡ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.  ಆರೋಪಿ ಪಿಯುಸಿ ವ್ಯಾಸಂಗ ಮಾಡಿದ್ದು, ನರ್ಸಿಂಗ್ ಹೋಮ್‍ವೊಂದರಲ್ಲಿ ಹೋಮ್ ನರ್ಸಿಂಗ್ ಕೆಲಸ ಮಾಡುತ್ತಿದ್ದ. ಒಂದು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದ. ಯಾವುದೇ ಕೆಲಸವಿಲ್ಲದೆ, ಜೀವನ ನಿರ್ವಹಣೆಗಾಗಿ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಪೆÇಲೀಸರು ಹೇಳಿದರು.
ಸೂಕ್ತ ಬಹುಮಾನ
ಧೈರ್ಯ ಪ್ರದರ್ಶಿಸಿ ಆರೋಪಿಯನ್ನು ಹಿಡಿದು ಪೆÇಲೀಸರಿಗೊಪ್ಪಿಸಿದ ಆಟೋ ಚಾಲಕ ರುದ್ರೇಶ್‍ಗೆ ನಗರ ಪೆÇಲೀಸ್ ಆಯುಕ್ತರು ಮತ್ತು ಉತ್ತರ ವಿಭಾಗ ಉಪ ಪೆÇಲೀಸ್ ಆಯುಕ್ತರು ಸೂಕ್ತ ಬಹುಮಾನ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೋ ಮಾಜಿ ಅಧ್ಯಕ್ಷ, ಬೆಂಗಳೂರಿನ ಕಸ್ತೂರಿ ರಂಗನ್ ಇನ್ನಿಲ್ಲ, ಇವರ ಸಾಧನೆ ಹೀಗಿದೆ

CET Exam ಜನಿವಾರ ಪ್ರಕರಣ: ವಿದ್ಯಾರ್ಥಿ ಸಚಿವ್ರತ್ ಕುಲಕರ್ಣಿಗೆ ಬಿಗ್ ಆಫರ್ ಕೊಟ್ಟ ಸಚಿವರು

Pehalgam: ಪಹಲ್ಗಾಮ್ ದಾಳಿಯಲ್ಲಿ ಗಾಯಗೊಂಡವರಿಗಾಗಿ ಹಗಲು ರಾತ್ರಿ ಚಿಕಿತ್ಸೆ ನೀಡಿದ ವೈದ್ಯ ಹೀರೋಗಳು ಇವರೇ ನೋಡಿ

Pehalgam terror attack: ಇಸ್ರೇಲ್ ಬಳಿಕ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ: ಏನಿದರ ಹಿಂದಿನ ಲೆಕ್ಕಾಚಾರ

Mangaluru: ಪಹಲ್ಗಾಮ್ ಉಗ್ರರ ದಾಳಿಯನ್ನು ಸಮರ್ಥಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್

ಮುಂದಿನ ಸುದ್ದಿ
Show comments