Webdunia - Bharat's app for daily news and videos

Install App

ಯುವತಿಯರನ್ನು ನಗರಕ್ಕೆ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ

Webdunia
ಗುರುವಾರ, 16 ಡಿಸೆಂಬರ್ 2021 (22:23 IST)
ನೆರೆಯ ಬಾಂಗ್ಲಾದೇಶ ಹಾಗೂ ಪಶ್ಚಿಮ ಬಂಗಾಳದಿಂದ ಮಾನವ ಕಳ್ಳ ಸಾಗಾಣೆ ಮೂಲಕ ಯುವತಿಯರನ್ನು ನಗರಕ್ಕೆ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯೊಬ್ಬಳನ್ನು ಕೋಡಿಗೆಹಳ್ಳಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. 
ಮಹಾರಾಷ್ಟ್ರ ಮೂಲದ ಜ್ಯೋತಿ (47) ಬಂಧಿತೆ. ಆರೋಪಿಯಿಂದ ಇಬ್ಬರು ಸಂತ್ರಸ್ತ ಯುವತಿಯರನ್ನು ರಕ್ಷಿಸಲಾಗಿದೆ ಎಂದು ಪೆÇಲೀಸರು ತಿಳಿಸಿದರು. 
ಆರೋಪಿ ಜ್ಯೋತಿಯು, ಬಾಂಗ್ಲಾ ಹಾಗೂ ಪಶ್ಚಿಮ ಬಂಗಾಳ ಮೂಲದ ಯುವತಿಯರನ್ನು ಅಕ್ರಮವಾಗಿ ರವಾನೆ ಮಾಡಿಕೊಂಡು, ನಗರದ ನಾನಾ ಕಡೆಗಳಲ್ಲಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದಳು. ಈಗಾಗಲೇ ತನ್ನ ಸಂಪರ್ಕಿಸಿ ವೇಶ್ಯಯರ ಜತೆ ಸಂಬಂಧ ಹೊಂದಿದ್ದ ಪರಿಚಯಸ್ಥ ಯುವಕರ ಮೂಲಕ ಗ್ರಾಹಕರನ್ನು ಹುಡುಕುತ್ತಿದ್ದಳು. ಅವರಿಗೆ ಯುವತಿಯರನ್ನು  ಕಳುಹಿಸಿ ಹಣ ಗಳಿಸುತ್ತಿದ್ದಳು ಎಂದು ತಿಳಿದುಬಂದಿದೆ. 
ಇದೇ ರೀತಿ ಅಕ್ರಮವಾಗಿ ಕರೆತಂದಿದ್ದ ಯುವತಿಯನ್ನು ಭದ್ರಪ್ಪ ಲೇಔಟ್‍ನ ಲಾಡ್ಜ್‍ವೊಂದರಲ್ಲಿ  ಕೂಡಿ ಹಾಕಿ ವೇಶ್ಯಾವಾಟಿಕೆ ನಡೆಸುತ್ತಿದ್ದಳು. ಈ ಬಗ್ಗೆ ಎನ್‍ಜಿಒ ಸಂಸ್ಥೆಯೊಂದು ಕೋಡಿಗೆಹಳ್ಳಿ ಠಾಣೆ ಪೆÇಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧಾರಿಸಿ ಪೆÇಲೀಸರು ಲಾಡ್ಜ್ ಮೇಲೆ ದಾಳಿ ನಡೆಸಿ ಜ್ಯೋತಿಯನ್ನು ಬಂಧಿಸಿ, ಇಬ್ಬರು ಸಂತ್ರಸ್ತ ಯುವತಿಯರನ್ನು ರಕ್ಷಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments