Webdunia - Bharat's app for daily news and videos

Install App

ಯುವತಿಯರನ್ನು ನಗರಕ್ಕೆ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ

Webdunia
ಗುರುವಾರ, 16 ಡಿಸೆಂಬರ್ 2021 (22:23 IST)
ನೆರೆಯ ಬಾಂಗ್ಲಾದೇಶ ಹಾಗೂ ಪಶ್ಚಿಮ ಬಂಗಾಳದಿಂದ ಮಾನವ ಕಳ್ಳ ಸಾಗಾಣೆ ಮೂಲಕ ಯುವತಿಯರನ್ನು ನಗರಕ್ಕೆ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯೊಬ್ಬಳನ್ನು ಕೋಡಿಗೆಹಳ್ಳಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. 
ಮಹಾರಾಷ್ಟ್ರ ಮೂಲದ ಜ್ಯೋತಿ (47) ಬಂಧಿತೆ. ಆರೋಪಿಯಿಂದ ಇಬ್ಬರು ಸಂತ್ರಸ್ತ ಯುವತಿಯರನ್ನು ರಕ್ಷಿಸಲಾಗಿದೆ ಎಂದು ಪೆÇಲೀಸರು ತಿಳಿಸಿದರು. 
ಆರೋಪಿ ಜ್ಯೋತಿಯು, ಬಾಂಗ್ಲಾ ಹಾಗೂ ಪಶ್ಚಿಮ ಬಂಗಾಳ ಮೂಲದ ಯುವತಿಯರನ್ನು ಅಕ್ರಮವಾಗಿ ರವಾನೆ ಮಾಡಿಕೊಂಡು, ನಗರದ ನಾನಾ ಕಡೆಗಳಲ್ಲಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದಳು. ಈಗಾಗಲೇ ತನ್ನ ಸಂಪರ್ಕಿಸಿ ವೇಶ್ಯಯರ ಜತೆ ಸಂಬಂಧ ಹೊಂದಿದ್ದ ಪರಿಚಯಸ್ಥ ಯುವಕರ ಮೂಲಕ ಗ್ರಾಹಕರನ್ನು ಹುಡುಕುತ್ತಿದ್ದಳು. ಅವರಿಗೆ ಯುವತಿಯರನ್ನು  ಕಳುಹಿಸಿ ಹಣ ಗಳಿಸುತ್ತಿದ್ದಳು ಎಂದು ತಿಳಿದುಬಂದಿದೆ. 
ಇದೇ ರೀತಿ ಅಕ್ರಮವಾಗಿ ಕರೆತಂದಿದ್ದ ಯುವತಿಯನ್ನು ಭದ್ರಪ್ಪ ಲೇಔಟ್‍ನ ಲಾಡ್ಜ್‍ವೊಂದರಲ್ಲಿ  ಕೂಡಿ ಹಾಕಿ ವೇಶ್ಯಾವಾಟಿಕೆ ನಡೆಸುತ್ತಿದ್ದಳು. ಈ ಬಗ್ಗೆ ಎನ್‍ಜಿಒ ಸಂಸ್ಥೆಯೊಂದು ಕೋಡಿಗೆಹಳ್ಳಿ ಠಾಣೆ ಪೆÇಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧಾರಿಸಿ ಪೆÇಲೀಸರು ಲಾಡ್ಜ್ ಮೇಲೆ ದಾಳಿ ನಡೆಸಿ ಜ್ಯೋತಿಯನ್ನು ಬಂಧಿಸಿ, ಇಬ್ಬರು ಸಂತ್ರಸ್ತ ಯುವತಿಯರನ್ನು ರಕ್ಷಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments