Webdunia - Bharat's app for daily news and videos

Install App

ಗೃಹಲಕ್ಷ್ಮಿಗೆ ವರ್ಷದ ಸಂಭ್ರಮ: ‌ಸ್ಪೂರ್ತಿಯುತ ಕಥೆಗಳನ್ನು ಹಂಚಿ ಖುಷಿಪಟ್ಟ ಸಿದ್ದರಾಮಯ್ಯ

Sampriya
ಭಾನುವಾರ, 1 ಸೆಪ್ಟಂಬರ್ 2024 (12:15 IST)
ಬೆಂಗಳೂರು: ರಾಜ್ಯದ ಕಾಂಗ್ರೆಸ್‌ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಈಗ ವರ್ಷದ ಸಂಭ್ರಮ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಯ ಫಲಾನುಭವಿಗಳ ಸ್ಪೂರ್ತಿಯುತ ಕಥೆಗಳನ್ನು ಹಂಚಿಕೊಂಡು ಖುಷಿಪಟ್ಟಿದ್ದಾರೆ.

ನಾಡಿನ ನನ್ನ ಅಕ್ಕತಂಗಿಯರ, ತಾಯಂದಿರ ಕುಟುಂಬ ನಿರ್ವಹಣೆಯ ಹೊರೆಯನ್ನು ತಗ್ಗಿಸಿ, ಅವರಿಗೆ ನೆಮ್ಮದಿಯ ಬದುಕು ಕಟ್ಟಿಕೊಡಲು ರೂಪಿಸಿದ ಗೃಹಲಕ್ಷ್ಮಿ ಯೋಜನೆ ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಯೋಜನೆಯ ಪೂರ್ಣ ಸದುಪಯೋಗ ಪಡೆದು ನವ ಉತ್ಸಾಹದಿಂದ ಹೊಸ ಬದುಕಿನತ್ತ ಹೆಜ್ಜೆಹಾಕುತ್ತಿರುವ ಫಲಾನುಭವಿ ಮಹಿಳೆಯರ ಯಶೋಗಾಥೆಯಿವು. ಬೆರಳೆಣಿಕೆಯಷ್ಟು ಮಾತ್ರ ಬೆಳೆಕಿಗೆ ಬಂದಿವೆ, ಸುದ್ದಿಯಾಗದ ಲಕ್ಷಾಂತರ ಕತೆಗಳಿವೆ. ಈ ಎಲ್ಲವೂ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಾಗಿದೆ ಎಂದು ಅವರು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.

ವಿದ್ಯಾಭ್ಯಾಸಕ್ಕೆ ನೆರವಾದ ಗೃಹಲಕ್ಷ್ಮಿ ಹಣ, ಹಾವೇರಿಯ ಮಹಿಳೆಯೊಬ್ಬರು ಸೊಸೆಗೆ ಫ್ಯಾನ್ಸಿ ಸ್ಟೋರ್‌ ತೆರೆದ ಕಥೆ, ವೃದ್ದೆಯೊಬ್ಬರು ಗೃಹಲಕ್ಷ್ಮಿ ಹಣದಿಂದ ಹೋಳಿಗೆ ಊಟ ಹಾಕಿಸಿದ ಸಂದರ್ಭ... ಹೀಗೆ ಹಣ ಸದುಪಯೋಗವಾದ ಕುರಿತ ಉದಾಹರಣೆಗಳನ್ನು ಅವರು ಹಂಚಿಕೊಂಡಿದ್ದಾರೆ.

2023ರ ಆ.30 ರಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿತ್ತು. ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಇದು ಪ್ರಮುಖವಾದುದು. ಪ್ರತಿ ತಿಂಗಳು ₹2 ಸಾವಿರ ಹಣವನ್ನು ಕುಟುಂಬದ ಯಜಮಾನಿಗೆ ನೀಡುವ ಯೋಜನೆ ಇದಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಮುಂದಿನ ಸುದ್ದಿ
Show comments