ವಿವಾಹಿತೆಗೆ ಬ್ಲಾಕ್ ಮೇಲ್ ಮಾಡಿದ ಯುವಕ!

Webdunia
ಶನಿವಾರ, 16 ಜುಲೈ 2022 (10:28 IST)
ಚಿಕ್ಕಬಳ್ಳಾಪುರ : ವಿವಾಹಿತೆಯ ಹಿಂದೆ ಬಿದ್ದ ಮತ್ತೊಬ್ಬ ವಿವಾಹಿತ, ತನ್ನನ್ನು ಪ್ರೀತಿಸುವಂತೆ ವಿವಾಹಿತೆಗೆ ದುಂಬಾಲು ಬಿದ್ದಿದ್ದ.

ಇದರಿಂದ ಮನನೊಂದ ಗೃಹಿಣಿ ಚಿಕ್ಕಬಳ್ಳಾಪುರ ಜಿಲ್ಲೆಯ ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಯುವಕನೊಬ್ಬ ವಿವಾಹಿತೆಯನ್ನು ಪ್ರೀತಿಸುತ್ತಿರುವುದನ್ನು ಅರಿತ ಆಕೆಯ ಮನೆಯವರು, ಆತನಿಗೆ ಬುದ್ಧಿ ಹೇಳಿದ್ರು. ಇದರಿಂದಲೂ ಸುಮ್ಮನಾಗದ ಆತ ವಿವಾಹಿತೆಗೆ ಬ್ಲಾಕ್ ಮೇಲ್ ಮಾಡಲು ಆಕೆಯ ಫೋಟೋ ಜೊತೆ ತನ್ನ ಫೋಟೋ ಸೇರಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ.

ಇದ್ರಿಂದ ಮಹಿಳೆ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಚೌಡರೆಡ್ಡಿಪಾಳ್ಯದಲ್ಲಿ ನಡೆದಿದೆ. 

ಆಲ್ಫೀಯಾ ತಾಜ್ ಮೃತ ವಿವಾಹಿತೆ. ಈಕೆಗೆ ಇನ್ನೂ ಹದಿನೇಳು ವರ್ಷ ವಯಸ್ಸು. ಅಲ್ಪೀಯಾ ತಾಜ್ಗೆ ಹೈಸ್ಕೂಲ್ನಲ್ಲಿ ಓದುತ್ತಿದ್ದಾಗಲೇ ಆಕೆಯ ಪೋಷಕರು ಬಲವಂತವಾಗಿ ಮದುವೆ ಮಾಡಿ ಕೈ ತೊಳೆದುಕೊಂಡಿದ್ರು. ಆದ್ರೆ ಗಂಡನ ಮನೆಯಲ್ಲಿ ಇರಲಾಗದ ಆಲ್ಫೀಯಾ ತಾಜ್ ವಾಪಸ್ ಆಗಮಿಸಿ ತವರು ಮನೆಯಲ್ಲಿ ಇದ್ದಳು.

ಚೌಡರೆಡ್ಡಿ ಪಾಳ್ಯಾ ನಿವಾಸಿ ಹಾಗೂ ಪರಿಚಯಸ್ಥ ಯುವಕ ಸಯ್ಯದ್ ನಾಸೀರ್ ಆಲ್ಫೀಯಾ ಮೇಲೆ ಕಣ್ಣು ಹಾಕಿದ್ದ. ಆಲ್ಫೀಯಾಳನ್ನು ಪ್ರೀತಿಸುವುದಾಗಿ ಹೇಳಿ ಆಕೆಯ ಹಿಂದೆ ಬಿದ್ದಿದ್ದ. ಇದ್ರಿಂದ ಆಲ್ಫೀಯಾ ಸಹೋದರರು ಸಯ್ಯದ್ ನಾಸೀರ್ಗೆ ಬೈಯ್ದು ಬುದ್ಧಿ ಹೇಳಿ ಎಚ್ಚರಿಕೆ ನೀಡಿದ್ರು.

ಆದ್ರು ಸುಮ್ಮನಾಗದ ನಾಸೀರ್, ಆಲ್ಫೀಯಾಳ ಫೋಟೋ ಜೊತೆ ತನ್ನ ಫೋಟೋ ಜೋಡಿಸಿ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾನೆ. ಇದ್ರಿಂದ ನೊಂದು ಆಲ್ಫೀಯಾ ತಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆ ಸಹೋದರ ಆರೋಪಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments