Webdunia - Bharat's app for daily news and videos

Install App

ಸಾವಿನಲ್ಲೂ ಸಾರ್ಥಕತೆ ಮೆರೆದ ಕೊಡಗಿನ ಯುವಕ: ರಾಜ್ಯದಲ್ಲಿ ಮೊದಲ ಬಾರಿಗೆ ಮೂಳೆ ದಾನ

Sampriya
ಮಂಗಳವಾರ, 24 ಡಿಸೆಂಬರ್ 2024 (16:59 IST)
Photo Courtesy X
ಮಡಿಕೇರಿ: ಬ್ರೈನ್ ಡೆಡ್ ಆದ ಯುವಕನೊಬ್ಬ ಸಾವಿನಲ್ಲೂ ಸಾರ್ಥಕತೆ ಮೆರೆದ ಘಟನೆ ಕೊಡಗಿನಲ್ಲಿ ನಡೆದಿದೆ. ಹೃದಯ, ಕಣ್ಣು, ಕಿಡ್ನಿ, ಚರ್ಮ, ಲಿವರ್‌ನಂತಹ ಮನುಷ್ಯನ ಅಂಗಾಂಗಳನ್ನು ದಾನ ಮಾಡುವುದನ್ನು ಕೇಳಿದ್ದೇವೆ. ಆದರೆ, ಕೊಡಗಿನ ಯುವಕನೋರ್ವ ತನ್ನ ಮೂಳೆಗಳನ್ನೇ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾನೆ. ಈ ಮೂಲಕ ಕ್ಯಾನ್ಸರ್‌ಪೀಡಿತ 6 ಮಕ್ಕಳ ಕಾಲುಗಳಿಗೆ ಬಲ ಬಂದಂತಾಗಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಂಬೂರು ಗ್ರಾಮದ 33 ವರ್ಷದ ಯುವಕ ಈಶ್ವರ್ ಅಪಘಾತದಲ್ಲಿ ಗಾಯಗೊಂಡಿದ್ದು, ಬ್ರೈನ್ ಡೆಡ್​ ಆಗಿದೆ.

ಹೀಗಾಗಿ ಕುಟುಂಬಸ್ಥರು​ ಸಾವಿನ ಸಂದರ್ಭದಲ್ಲಿ ಈಶ್ವರ್​ನ ಮೂಳೆಗಳನ್ನ ಆಸ್ಪತ್ರೆಗೆ ದಾನ ಮಾಡಿದ್ದಾರೆ. ಈ ರೀತಿ ಮೂಳೆ ದಾನ ಮಾಡಿರುವುದು ಕರ್ನಾಟಕ ರಾಜ್ಯದಲ್ಲೇ ಮೊದಲಾಗಿದೆ.

ಅಪಘಾತದಲ್ಲಿ ಡ್ರೈನ್​ ಡೆಡ್​ ಆಗಿದ್ದ ಯುವಕನ ಅಸ್ಥಿ (ಮೂಳೆ) ದಾನಕ್ಕೆ ಕುಟುಂಬಸ್ಥರು ಒಪ್ಪಿಗೆ ನೀಡಿದ್ದು, ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಎಲುಬು ಮತ್ತು ಕೀಲು ತಜ್ಞರ ವಿಭಾಗದ ಮುಖ್ಯಸ್ಥ ಡಾ.ವಿಕ್ರಮ್ ಶೆಟ್ಟಿ ನೇತೃತ್ವದಲ್ಲಿ ಅಪರೂಪದ ದಾನವನ್ನು ಯಶಸ್ವಿಯಾಗಿ ಸಂಗ್ರಹಿಸಲಾಗಿದೆ. ಇದರಿಂದ ಕ್ಯಾನ್ಸರ್‌ ಪೀಡಿತ 6 ಮಕ್ಕಳ ಕಾಲುಗಳನ್ನು ಉಳಿಸಬಹುದು ಎಂದು ಅಸ್ಥಿ ಸಂಗ್ರಹಿಸಿದ ಬಳಿಕ ಡಾ.ಶೆಟ್ಟಿ ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಜೈಶ್‌ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್‌ ಮಾವ ಮಟಾಶ್‌

Karnataka Monsoon rain: ರೈತರಿಗೆ ಗುಡ್‌ನ್ಯೂಸ್‌

ನಮ್ಮಲ್ಲಿರುವುದು ಬರೀ 6 ಲಕ್ಷ ಸೈನಿಕರು, ನಾವು ಉಳಿಯುವುದಿಲ್ಲ ಎಂದ ಪಾಕ್‌ನ ಮಾಜಿ ಸೇನಾಧಿಕಾರಿ

Operation Sindoor: ಶಾಲೆ, ಆಸ್ಪತ್ರೆ ಗುರಿಯಾಗಿಸಿ ನಡೆಸಿದ ಪಾಕ್‌ ಮಿಸೈಲ್‌ ದಾಳಿಗೆ ತಕ್ಕ ಉತ್ತರ

ಪಾಕಿಸ್ತಾನದ ಸೇನಾ ಪಡೆಯ ಗುಂಡಿನ ದಾಳಿಗೆ ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments