Webdunia - Bharat's app for daily news and videos

Install App

ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Webdunia
ಗುರುವಾರ, 7 ಡಿಸೆಂಬರ್ 2023 (13:43 IST)
ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಯುವಕ ಬೆಂಕಿ ಹಚ್ಚಿಕೊಂಡಿರುವ ಘಟನೆ ಕೆಂಗೇರಿಯ ಕೊಡಿಗೆ ಪಾಳ್ಯದಲ್ಲಿ ನಿನ್ನೆ ಮದ್ಯಾಹ್ನ ಸುಮಾರಿಗೆ ಘಟನೆ ನಡೆದಿದೆ.

ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ಯುವಕ ರಾಕೇಶ್ ಆಗಿದ್ದು,ಐದಾರು ವರ್ಷದಿಂದ‌ ಯುವತಿ ಜೊತೆ ಪ್ರೀತಿ ಮಾಡುತ್ತಿದ್ದ.ಇತ್ತೀಚೆಗೆ ಬೇರೆ ಯುವಕನ ಜೊತೆಗೆ ಮದುವೆಗೆ ಯುವತಿ ಸಿದ್ದವಾಗಿದ್ದಳು.ಇದರಿಂದಾಗಿ ಯುವತಿ ರಾಕೇಶನನ್ನು ಅವಾಯ್ಡ್ ಮಾಡಿದ್ದಳು.
 
ನಿನ್ನೆ ರಾಕೇಶ್ ಯುವತಿ ಮನೆಯ ಬಳಿ ಹೋಗಿ ಪ್ರಶ್ನೆ ಮಾಡಿದ್ದ.ಈ ಸಂದರ್ಭದಲ್ಲಿ ರಾಕೇಶ್ ಹಾಗೂ ಯುವತಿ ಜೊತೆ ಗಲಾಟೆ ಆಗಿತ್ತು.ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ.ಪೆಟ್ರೋಲ್ ಸುರಿದುಕೊಂಡು ರಾಕೇಶ್ ಬೆಂಕಿ ಹಚ್ಚಿಕೊಂಡಿದ್ದಾನೆ.ಕೂಡಲೇ ರಾಕೇಶ್ ನನ್ನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ರಾಕೇಶ್ ದೇಹದ ಬಹುತೇಕ ಬಾಗ ಸುಟ್ಟು  ಹೋಗಿತ್ತು.ತೀವ್ರ ನೋವಿನಿಂದ ಬಳಲುತ್ತಿದ್ದ ರಾಕೇಶ್ ನಿನ್ನೆ ರಾತ್ರಿ ಮೃತಪಟ್ಟಿದ್ದಾನೆ.ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments