Webdunia - Bharat's app for daily news and videos

Install App

ಹೊಸ ವರ್ಷದ ದಿನವೇ ಬೆಂಗಳೂರಿನಲ್ಲಿ ಯುವಕನ ಹತ್ಯೆ

Webdunia
ಸೋಮವಾರ, 1 ಜನವರಿ 2024 (15:00 IST)
ಹೊಸ ವರ್ಷದ ದಿನವೇ ಬೆಂಗಳೂರಿನ ಹನುಮಂತ್ ನಗರದ 80 ಅಡಿ ರಸ್ತೆಯಲ್ಲಿ ಯುವಕನ ಕಗ್ಗೊಲೆ ನಡೆದಿದೆ.ಆಟೋದಲ್ಲಿ ಬಂದ ಹಂತಕರಿಂದ ಮಾರಕಾಸ್ತ್ರಗಳಿಂದ  ಕೊಚ್ಚಿ ಕೊಲೆ ಮಾಡಲಾಗಿದೆ.21 ವರ್ಷದ ವಿಜಯ್ ಕೊಲೆಯಾದ ಬನಶಂಕರಿ ನಿವಾಸಿಯಾಗಿದ್ದು,ವಿಜಯ್ ಕೊಲೆಗೈದು ರಸ್ತೆ ಬದಿಯಲ್ಲಿ ದುಷ್ಕರ್ಮಿಗಳು ಶವ ಎಸೆದು ಪರಾರಿಯಾಗಿದ್ದಾರೆ.
 
ನಿನ್ನೆ ರಾತ್ರಿ 1 ಗಂಟೆ ಸುಮಾರಿಗೆ ಕೊಲೆ ನಡೆದಿದೆ.ಸ್ನೇಹಿತರಿಂದಲೇ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ.ಕುಡಿದ ಮತ್ತಿನಲ್ಲಿ ಕೊಲೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ.ನಿನ್ನೆ ತನ್ನ ಗೆಳೆಯರ ಜೊತೆ ವಿಜಯ್ ಸೆಲೆಬ್ರೇಷನ್ ಗೆ ಬಂದಿದ್ದ.ರಾತ್ರಿ ನ್ಯೂ ಇಯರ್ ಸೆಲೆಬ್ರೇಷನ್ ಮಾಡಿ ಕುಡಿದಿದ್ದಾರೆ.ಮನೆಗೆ ಹೋಗೋವಾಗ ವಿಜಯ್ ಹಾಗೂ ಗೆಳೆಯರ ಮಧ್ಯೆ ಜಗಳ ಶುರುವಾಗಿತ್ತು.ಆಟೋದಲ್ಲಿ ಹೋಗೋವಾಗ  ವಿಜಯ್ ಹಾಗೂ ಸ್ನೇಹಿತರು ಜಗಳ ಹೆಚ್ಚು ಮಾಡಿಕೊಂಡಿದ್ದರು.

ಜಗಳದ ವೇಳೆ ವಿಜಯ್ ಎದೆಗೆ ಓರ್ವ ಚಾಕು ಇರಿದಿದ್ದ.ಚಾಕು ಇರಿದು ಶ್ರೀನಿವಾಸ್ ನಗರ ಬಸ್ ನಿಲ್ದಾಣದ ಮುಂದೆ ಬಿಸಾಕಿ ಎಸ್ಕೇಪ್ ಹಾಕಿದ್ದಾರೆ.ಈ ವೇಳೆ ತೀವ್ರ ರಕ್ತಸ್ರಾವವಾಗಿ ವಿಜಯ್ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹನುಮಂತ ನಗರ ಪೊಲೀಸರಿಂದ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments