ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

Sampriya
ಶನಿವಾರ, 18 ಅಕ್ಟೋಬರ್ 2025 (21:03 IST)
ಬೆಂಗಳೂರು: ಕೆಲಸಕ್ಕೆಂದು ಸಿಲಿಕಾನ್ ಸಿಟಿಗೆ ಬಂದು ಲಾಡ್ಜ್‌ನಲ್ಲಿ ತಂಗಿದ್ದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಯುವಕ ತಕ್ಷಿತ್‌ (20) ಅನುಮಾನಸ್ಪದವಾಗಿ ಸಾವನ್ನಪ್ಪಿದ ಸಂಬಂಧ ಮಡಿವಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಂಟು ದಿನಗಳ ಹಿಂದೆ ತಕ್ಷಿತ್‌ ತನ್ನ ಸ್ನೇಹಿತೆಯೊಂದಿಗೆ ನಗರದ ವಿವಿಧೆಡೆ ಕೆಲಸ ಹುಡುಕುತ್ತಿದ್ದರು. 

ಮಡಿವಾಳದ ಗ್ರ್ಯಾಂಡ್ ಚಾಯ್ಸ್ ಹೋಟೆಲ್‌ನಲ್ಲಿ ತಂಗಿದ್ದರು. ಎರಡು ದಿನಗಳ ಹಿಂದೆ ಯುವತಿ ತಮ್ಮೂರಿಗೆ ವಾಪಸ್ ತೆರಳಿದ್ದರು. ಹೀಗಾಗಿ, ತಕ್ಷಿತ್‌ ಒಬ್ಬರೇ ಕೊಠಡಿಯಲ್ಲಿದ್ದರು. ಕೊಠಡಿಗೆ ಊಟ, ತಿಂಡಿ ತರಿಸಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.


ಕೊಠಡಿಯಿಂದ ಯಾರೂ ಹೊರಗೆ ಬಾರದ ಕಾರಣಕ್ಕೆ ಅನುಮಾನಗೊಂಡ ಹೋಟೆಲ್‌ ಸಿಬ್ಬಂದಿ ಶುಕ್ರವಾರ ಸಂಜೆ ಕೊಠಡಿಯ ಬಾಗಿಲು ಒಡೆದು ಪರಿಶೀಲಿಸಿದಾಗ ಯುವಕ ಮೃತಪಟ್ಟಿರುವುದು ಪತ್ತೆಯಾಗಿತ್ತು. 

ಮೃತ ಯುವಕ ಅನಾರೋಗ್ಯದಿಂದ ಬಳಲುತ್ತಿದ್ದು, ಅತಿ ಹೆಚ್ಚು ಸಿಗರೇಟು ಸೇದುತ್ತಿದ್ದರು. ಇನ್ನೂ ಮರಣೋತ್ತರ ಪರೀಕ್ಷೆಯಲ್ಲಿ ಸಾವಿಗೆ ನಿಖರ ಕಾರಣ ಹೊರಬೀಳಲಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಆರ್ ಎಸ್ಎಸ್ ಕಾಪಾಡಿತಾ: ಕೇಸ್ ಹಾಕ್ತೀನಿ ಎಂದ ಪ್ರಿಯಾಂಕ್

ಕೃತಿಕಾ ಸಾವನ್ನಪ್ಪಿದ ಬಳಿಕ ಮಹೇಂದ್ರ ರೆಡ್ಡಿ ಈ ವಿಚಾರಕ್ಕೆ ತುಂಬಾನೇ ಹಠ ಹಿಡಿದಿದ್ದಂತ್ತೆ

ಬೆಳೆದು ಬಂದ ಮೂಲವನ್ನು ಎಂದೂ ಮರೆಯಬಾರದು: ಟೀಕಾಕಾರರಿಗೆ ಡಿಕೆ ಶಿವಕುಮಾರ್‌ ಕ್ಲಾಸ್‌

ಬಿಹಾರ ಚುನಾವಣೆ: ಕೈತಪ್ಪಿದ ಟಿಕೆಟ್‌, ಬಟ್ಟೆ ಹರಿದುಕೊಂಡು ಹೋರಳಾಡಿದ ಆರ್‌ಜೆಡಿ ನಾಯಕ

ಅಭಿಷೇಕ್ ಆಚಾರ್ಯ ಬದುಕಿನಲ್ಲಿ ಆಟವಾಡಿದ ನಿರೀಕ್ಷಾ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments