Select Your Language

Notifications

webdunia
webdunia
webdunia
webdunia

ಯುವತಿ ಕೊಲೆಗೈದ ಯುವಕ ಸಾವು

ಯುವತಿ ಕೊಲೆಗೈದ ಯುವಕ ಸಾವು
ದಾವಣಗೆರೆ , ಶುಕ್ರವಾರ, 23 ಡಿಸೆಂಬರ್ 2022 (19:31 IST)
ಪ್ರೀತಿ ನಿರಾಕರಿಸಿದ್ದ ಯುವತಿಯನ್ನು ಹಾಡಹಗಲೇ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಾವಣಗೆರೆಯಲ್ಲಿ ನಿನ್ನೆ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಗುರುವಾರ ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆದಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಯುವಕನೂ ಮೃತಪಟ್ಟಿದ್ದಾನೆ. ಯುವತಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಸಾದತ್ ಅಲಿಯಾಸ್ ಚಂದ್ ಪೀರ್ ಎಂದು ಗುರುತಿಸಲಾಗಿದೆ. ಗುರುವಾರ ದಾವಣಗೆರೆ ನಗರದ ಪಿಜೆ ಬಡಾವಣೆ ಚರ್ಚ್ ಬಳಿ ಆತ ಯುವತಿ ಚಾಂದ್ ಸುಲ್ತಾನಳನ್ನು ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದ. ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ವಿಚಾರ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಯುವಕನನ್ನು ದಾವಣಗೆರೆ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾದತ್ ಸಾವನ್ನಪ್ಪಿದ್ದಾನೆ.

Share this Story:

Follow Webdunia kannada

ಮುಂದಿನ ಸುದ್ದಿ

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ