Webdunia - Bharat's app for daily news and videos

Install App

ಬಣ್ಣದ ಮಾತಿನಿಂದ 41 ಲಕ್ಷ ಕಳೆದುಕೊಂಡ ಯುವಕ!

Webdunia
ಸೋಮವಾರ, 21 ನವೆಂಬರ್ 2022 (07:22 IST)
ವಿಜಯಪುರ : ಇತ್ತಿಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ ಸದುಪಯೋಗದ ಬದಲು ದುರುಪಯೋಗವೇ ಹೆಚ್ಚಾಗುತ್ತಿದೆ.

ಇನ್ನು ಕೆಲವರಂತು ಇದನ್ನೇ ಬಂಡವಾಳ ಮಾಡಿಕೊಂಡು ಹೊಸ ಹೊಸ ವಿನೂತನ ಹಣ ದೋಚಿ ಪರಾರಿಯಾಗುವ ಸುದ್ದಿಗಳು ಬಂದಿವೆ. ಇಷ್ಟಾದ್ರೂ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ.

ಬೆಳದಿಂಗಳ ಬಾಲೆಯ ಬಲೆಗೆ ಬಿದ್ದು ಅಮಾಯಕನೋರ್ವ ಲಕ್ಷ ಲಕ್ಷ ಕಳೆದುಕೊಂಡು ಕಂಗಾಲಾದಿದ್ದಾನೆ. ಮೂಲತಃ ವಿಜಯಪುರ ಜಿಲ್ಲೆಯ ಅಲಮೇಲ ತಾಲೂಕಿನ ಬಗಲೂರ ಗ್ರಾಮದ ಪರಮೇಶ್ವರ್ ಹಿಪ್ಪರಗಿ. ಇವರು ಸದ್ಯ ತೆಲಾಂಗಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿ.

ತನ್ನ ಸ್ವಗ್ರಾಮದಲ್ಲಿದ್ದಾಗ ಕಳೆದ ಜೂನ್ 29 ರಂದು ಮಂಜುಳಾ ಕೆ.ಆರ್ ಎಂಬ ಫೇಸ್ ಬುಕ್ ಅಕೌಂಟ್ನಿಂದ ಫ್ರೇಂಡ್ ರಿಕ್ವೆಸ್ಟ್ ಬಂದಿದೆ. ಅದನ್ನ ಪರಮೇಶ್ವರ್ ಕನ್ ಫರ್ಮ ಮಾಡ್ತಿದಂತೆ ಆ ಕಡೆಯಿಂದ ಯುವತಿ ಮೆಸೆಂಜರ್ನಲ್ಲಿ ಹಾಯ್ ಅಂತಾ ಸಂದೇಶ ಕಳಿಸಿ ಪರಮೇಶ್ವರನನ್ನ ಖೆಡ್ಡಾಕ್ಕೆ ಕೆಡವಿದ್ದಾಳೆ. ನಂತರ ಪ್ರತಿ ದಿನ ಮೆಸೇಜ್ ಮಾಡುವ ಮೂಲಕ ಅಜ್ಞಾತ ಸಖಿಯೊಂದಿಗೆ ಪರಮೇಶ್ವರ್ ಸಲುಗೆ ಬೆಳಸಿಕೊಂಡಿದ್ದಾನೆ.

ಅಕ್ಟೋಬರ್ 14 ರಂದು ತಾಯಿ ಆರೋಗ್ಯ ಸರಿಯಿಲ್ಲ 700 ರೂ ಫೋನ್ ಪೇ ಮಾಡಲು ಸಂದೇಶ ಬಂದಿದೆ. ಆಗ ಪರಮೇಶ್ವರ 2000 ರೂ ಹಾಕಿದ್ದಾನೆ. ನಂತರ ಒಂದು ವಾರದ ಕಳೆದ ಮೇಲೆ ತಾಯಿ ಮೃತಳಾಗಿದ್ದಾಳೆ ಅಂತಾ 2000 ರೂ. ಕಳಿಸಲು ಸಂದೇಶ ಬಂದಿದೆ. ಆಗಲೂ ಕೂಡ ಪರಮೇಶ್ವರ್ 2000 ರೂ ಹಾಕಿದ್ದಾನೆ. ಅದೇ ರೀತಿ ಬೆಳದಿಂಗಳ ಬಾಲೆ ಕೇಳಿದಷ್ಟು, ಕೇಳಿದಾಗೆಲ್ಲ ಪರಮೇಶ್ವರ ಹಣ ಹಾಕಿದ್ದಾನೆ. ಕೆಲ ದಿನಗಳ ನಂತರ ಮಂಜುಳಾ ಕರೆ ಮಾಡಿ ಪರಮೇಶ್ವರ್ಗೆ ತಾನು ಐಎಎಸ್ ಪರೀಕ್ಷೆ ಪಾಸ್ ಆಗಿದ್ದೇನೆ.

ಡಿಸಿ ಪೋಸ್ಟ್ ಸಿಗುತ್ತದೆ. ಸದ್ಯ ಹಾಸನದಲ್ಲಿದ್ದೇನೆ ನನ್ನನ್ನು ನೋಡಿಕೊಳ್ಳುವವರು ಯಾರೂ ಇಲ್ಲ. ಬೆಂಗಳೂರಿಗೆ ಹೋಗಬೇಕಿದ್ದು, ಖರ್ಚಿಗೆ ಹಣವಿಲ್ಲ. ಹಣಕಾಸಿನ ಸಹಾಯ ಮಾಡಿದ್ರೆ ಮದುವೆ ಆಗುತ್ತೇನೆ ಅಂತಾ ಬುರುಡೆ ಬಿಟ್ಟಿದ್ದಾಳೆ. 

ಇದನ್ನ ನಂಬಿ ದುರಾಸೆಗೆ ಬಿದ್ದ ಪರಮೇಶ್ವರ್ 50 ಸಾವಿರ ರೂ ಹಾಕಿದ್ದಾನೆ. ಮತ್ತೆ ಕೆಲ ದಿನಗಳ ನಂತರ ಮತ್ತಷ್ಟು ಸಲುಗೆಯಿಂದ, ಪ್ರೀತಿಯಿಂದ ಮಾತನಾಡಿ ಹಂತ, ಹಂತವಾಗಿ ಅಷ್ಟಿಷ್ಟಲ್ಲ ಬರೋಬ್ಬರಿ 41.26 ಲಕ್ಷ ಪೀಕಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments