Webdunia - Bharat's app for daily news and videos

Install App

ಪ್ರೀತಿ ವಿರೋಧಿಸಿ ಯುವತಿ ತಂದೆಯಿಂದ ಯುವಕನ ಮೇಲೆ ಹಲ್ಲೆ! ಕಾರಣ ಕೇಳಿದ್ರೆ ಶಾಕ್ ಆಗ್ತೀರಾ?

Webdunia
ಮಂಗಳವಾರ, 27 ಜೂನ್ 2023 (13:00 IST)
ಕಲಬುರಗಿ : ಅಂತರ್ಜಾತಿ ಪ್ರೀತಿ ವಿರೋಧಿಸಿ ಯುವತಿ ತಂದೆಯಿಂದ ಯುವಕನ ಮೇಲೆ ಹಲ್ಲೆ ಮಾಡಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಗಾಗಿರುವ ಘಟನೆ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದ ಮನೆಯಲ್ಲಿ ನಡೆದಿದೆ.
 
ನೇಣುಬಿಗಿದುಕೊಂಡು ಗುರುಲಿಂಗಪ್ಪ ಮುಗಟಿ(26) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಮೃತ ವ್ಯಕ್ತಿ ನೆರೆಮನೆಯ ಯುವತಿಯನ್ನ ಪ್ರೀತಿಸುತ್ತಿದ್ದ. ಈ ವಿಚಾರ ಆಕೆಯ ತಂದೆಗೆ ಗೊತ್ತಾಗಿ, ಮಗಳ ತಂಟೆಗೆ ಬರದಂತೆ ಎಚ್ಚರಿಕೆ ಕೂಡ ನೀಡಿದ್ದ. ಇದಾದ ಬಳಿಕ ಮೃತ ಗುರುಲಿಂಗಪ್ಪ ಊರುಬಿಟ್ಟು ಬೆಂಗಳೂರು ಸೇರಿದ್ದ. ನಂತರ ಆತನಿಗೆ ಕರೆ ಮಾಡಿದ ಯುವತಿ ಕಲಬುರಗಿಗೆ ಬರುವಂತೆ ಹೇಳಿದ್ದಾಳೆ.

ಊರಿಗೆ ಬರುತ್ತಿದ್ದಂತೆ ಗುರುಲಿಂಗಪ್ಪ ಮತ್ತು ಆತನ ಸೋದರನ ಮೇಲೆ ಕಲ್ಲು, ಕಬ್ಬಿಣದ ರಾಡ್ನಿಂದ ಯುವತಿ ತಂದೆ ಹಲ್ಲೆ ಮಾಡಿದ್ದ. ಬಳಿಕ ಕೂಡಿ ಹಾಕಿದ್ದರು. ಇದೇ ಕಾರಣಕ್ಕೆ ಮನನೊಂದು ಯುವಕ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments