Webdunia - Bharat's app for daily news and videos

Install App

ಹಸೆಮಣೆ ಏರಬೇಕಿದ್ದ ಯುವತಿ ಅನುಮಾನ್ಪದ ಸಾವು

Webdunia
ಸೋಮವಾರ, 20 ನವೆಂಬರ್ 2023 (18:21 IST)
ಕಳೆದ ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಐಶ್ವರ್ಯ ಹಾಗೂ ಅಶೋಕ್ ಮದುವೆ ಫಿಕ್ಸ್ ಆಗಿತ್ತು. ಮದುವೆಗೆ ಇನ್ನೇನು ಎರಡು ದಿನ ಬಾಕಿ ಇತ್ತು. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಮಾಡಿಕೊಂಡಿದ್ದರು. ಆದ್ರೆ, ಹಸೆಮಣೆ ಏರಬೇಕಿದ್ದ ಯುವತಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ವಿಜಯನಗರದ ಟಿಬಿ ಕಾಲೋನಿಯ ಐಶ್ವರ್ಯ ಎಂಬ ಯುವತಿ ಮದುವೆಗೆ ಎರಡು ದಿನ ಬಾಕಿ ಇರುವಾಗಲೇ ಮೃತಪಟ್ಟಿದ್ದಾಳೆ.

ಮದುವೆ ಶಾಸ್ತ್ರಕ್ಕೆಂದು ಯುವಕನ ಮನೆಯವರು ಕರೆದುಕೊಂಡು ಹೋಗಿದ್ದಾರೆ. ಆದ್ರೆ, ಐಶ್ವರ್ಯ ವರನ ಮನೆಯಲ್ಲೇ ಪ್ರಾಣ ಬಿಟ್ಟಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಖಾಸಗಿ ಕಂಪನಿ‌ಯಲ್ಲಿ ಕೆಲಸ ಮಾಡುತ್ತಿದ್ದ ಐಶ್ವರ್ಯಳ ಮದುವೆ ಅಶೋಕ ಎನ್ನುವರ ಜೊತೆ ನವೆಂಬರ್ 23ಕ್ಕೆ ಫಿಕ್ಸ್ ಆಗಿತ್ತು. ಬೇರೆ-ಬೇರೆ ಜಾತಿಯವರಾಗಿದ್ದರೂ ಸಹ 10 ವರ್ಷದಿಂದ ಪ್ರೀತಿ ಮಾಡುತ್ತಿದ್ದ ಇವರಿಬ್ಬರು ಇನ್ನೇನು ಸಪ್ತಪದಿ ತುಳಿದು ಹೊಸ ಜೀವನ ಆರಂಭಿಸಬೇಕಿತ್ತು. ಆದ್ರೆ, ಯುವತಿ ಏಕಾಏಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಕಳೆದ 10 ದಿನಗಳಿಂದ ಪ್ರಿಯಕರನ ಮನೆ ಹೋಗಿದ್ದ ಯುವತಿ ಏಕಾಏಕಿ ಮೃತಪಟ್ಟಿದ್ದಾಳೆ. ಬಳಿಕ ನೇಣಿಗೆ ಶರಣಾಗಿದ್ದಾಳೆ ಎಂದು ಯುವತಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ನಾವೇ ಮದುವೆ ಮಾಡುತ್ತೇವೆ, ನೀವು ಬರುವುದು ಬೇಡ ಎಂದು ಅಶೋಕ್ ಮನೆಯವರು ಐಶ್ವರ್ಯಳ ಪೋಷಕರಿಗೆ ಹೇಳಿದ್ದರಂತೆ. ಆದ್ರೆ, ಇದೀಗ ಏಕಾಏಕಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮದ್ವೆ ಮುನ್ನವೇ ಯುವತಿ ಸಾವನ್ನಪ್ಪಿರುವುದು ಪೋಷಕರಿಗೆ ಅನುಮಾನ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments