Select Your Language

Notifications

webdunia
webdunia
webdunia
webdunia

ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
, ಗುರುವಾರ, 3 ಸೆಪ್ಟಂಬರ್ 2015 (11:30 IST)
ನಿನ್ನೆ ರಾತ್ರಿ ಕೆಲ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ದಿಲೀಪ್ ಚಿಕಿತ್ಸೆ ಫಲಿಕಾರಿಯಾಗದೆ ಇಂದು ಸಾವನ್ನಪ್ಪಿದ್ದಾನೆ.
 
ಮೃತ ದಿಲೀಪ್(35) ನಗರದ ಕಮ್ಮನಹಳ್ಳಿಯ ಆಲ್ವಿನ್ ರಸ್ತೆಯ ನಿವಾಸಿಯಾಗಿದ್ದಾನೆ. ಈತ ನಿನ್ನೆ ನಗರದ ಬಾಣಸವಾಡಿ ವ್ಯಾಪ್ತಿಯ ಜೀವನಹಳ್ಳಿಯಲ್ಲಿ ಸಂಚರಿಸುತ್ತಿದ್ದಾಗ ದುಷ್ಕರ್ಮಿಗಳ ತಂಡವೊಂದು ಏಕಾಕಏಕಿ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ಪರಿಣಾಮ ದಿಲೀಪ್ ಗಂಭೀರವಾಗಿ ಗಾಯಗೊಂಡು ರಕ್ತ ಸ್ರಾವವಾಗಿ ಒದ್ದಾಡುತ್ತಿದ್ದ. ಇದನ್ನು ಕಂಡ ಸ್ಥಳೀಯರು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾನೆ.
 
ಇನ್ನು ಮೃತ ದಿಲೀಪ್ ಕೆಲ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂದು ಹೇಳಲಾಗುತ್ತಿದ್ದು, ಇದೇ ದ್ವೇಷ ಹಿನ್ನೆಲೆಯಲ್ಲಿ ಆತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. 

Share this Story:

Follow Webdunia kannada