ಆಧಾರ್ ನೊಂದಣಿಗೆ ಈಗಲೂ ತಪ್ಪದ ಪರದಾಟ!

Webdunia
ಬುಧವಾರ, 1 ಆಗಸ್ಟ್ 2018 (14:04 IST)
ಆಧಾರ್ ನೊಂದಣಿಗಾಗಿ ಜನರ ಪರದಾಟ ಈಗಲೂ ತಪ್ಪುತ್ತಿಲ್ಲ. ಪ್ರತಿದಿನ ಕ್ಯೂ ನಲ್ಲಿ ಕಾದು ಕಾದು ಸುಸ್ತಾಗುತ್ತಿದ್ದಾರೆ ಹಳ್ಳಿ ಮಂದಿ. ತುಮಕೂರು‌ ಜಿಲ್ಲೆ ಕುಣಿಗಲ್ ನ ಆಧಾರ್ ನೊಂದಣಿ ಕೇಂದ್ರದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ.

ಆಧಾರ್ ನಲ್ಲಿ ಲೋಪಗಳಿಂದ ಪಡಿತರ ಇಲ್ಲದೆ ಜನರು ಪರದಾಡುತ್ತಿರುವ  ಚಿತ್ರಣ ಸಾಮಾನ್ಯವಾಗಿದೆ. ಆಧಾರ್ ತಿದ್ದುಪಡಿ ಮಾಡಿಸಲು ನಿತ್ಯ ಪರದಾಟ ಕೆಲಸವಾದಂತೆ ಆಗಿಬಿಟ್ಟಿದೆ. ದಿನಕ್ಕೆ 15-20 ಜನಕ್ಕೆ ಮಾತ್ರ ನೊಂದಣಿ ತಿದ್ದುಪಡಿ ಮಾಡುತ್ತಿರುವ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ದೂರದ ಹಳ್ಳಿಗಳಿಂದ ಬರುತ್ತಿರುವ ಜನರು ಹಳ್ಳಿಗರು ತೊಂದರೆ ಎದುರಿಸುತ್ತಿದ್ದಾರೆ. ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಕ್ಯೂನಲ್ಲಿ ನಿಂತು ಕಾದು ಕಾದು ವಾಪಾಸ್ಸಾಗುತ್ತಿದ್ದಾರೆ.

ಹಳ್ಳಿಗಳಿಂದ ಕೆಲಸ ಕಾರ್ಯ ಬಿಟ್ಟು ಪ್ರತಿದಿನ ಆಧಾರ್ ನೊಂದಣಿಗೆ ತಿರುಗುವ ಪರಿಸ್ಥಿತಿ ಎದುರಾಗುತ್ತಿರುವುದರಿಂದ ಆಧಾರ್ ಸಿಬ್ಬಂದಿ ವಿರುದ್ಧ ಜನರ ಆಕ್ರೋಶ ಹೆಚ್ಚುತ್ತಿದೆ. ಹೀಗಾಗಿ ಜನರಿಂದ ಆಧಾರ್ ಸಿಬ್ಬಂದಿಗಳು ಸಹ ತರಾಟೆಗೆ ಒಳಗಾಗುತಿದ್ದಾರೆ. 
ಟೋಕನ್ ಕೊಟ್ಟು ವ್ಯವಸ್ಥಿತವಾಗಿ ನೊಂದಣಿ, ತಿದ್ದುಪಡಿ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments