Select Your Language

Notifications

webdunia
webdunia
webdunia
webdunia

ಕೇಂದ್ರದ ವಿರುದ್ಧ ಸಮರ ಸಾರಲು ಎಎಪಿ ಸಿದ್ಧ: ಏ.22ಕ್ಕೆ ಪ್ರತಿಭಟನೆ

ಕೇಂದ್ರದ ವಿರುದ್ಧ ಸಮರ ಸಾರಲು ಎಎಪಿ ಸಿದ್ಧ: ಏ.22ಕ್ಕೆ ಪ್ರತಿಭಟನೆ
ನವದೆಹಲಿ , ಶುಕ್ರವಾರ, 3 ಏಪ್ರಿಲ್ 2015 (12:00 IST)
ವಿರೋಧ ಪಕ್ಷಗಳ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಅಂಗಿಕರಿಸಿರುವ ಭೂ ಸ್ವಾಧೀನ ಕಾಯಿದೆ-2015ನ್ನು ವಿರೋಧಿಸಿ ಏಪ್ರಿಲ್ 22ರಂದು ಕೇಂದ್ರ ಸ್ರಕಾರದ ವಿರುದ್ಧ ಪ್ರತಿಭಟನೆ ನಡೆಸಲು  ಎಎಪಿ ಮುಂದಾಗಿದೆ.
 
ಹೌದು, ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದ್ಲಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ದೆಹಲಿಯ ಜಂತರ್ ಮಂತರ್‌ನಿಂದ ಪ್ರಧಾನ ಮಂತ್ರಿಗಳ ಕಚೇರಿ ವರೆಗೆ ಈ ಪ್ರತಿಭಟನಾ ಮೆರವಣಿಗೆ ಸಾಗಲಿದೆ ಎಂದು ಪಕ್ಷದ ವಿಶ್ವಾಸನೀಯ ಮೂಲಗಳು ತಿಳಿಸಿವೆ. 
 
ಇನ್ನು ಎಎಪಿಯ ನಿರ್ಧಾರಕ್ಕೂ ಮುನ್ನವೇ ಕಾಂಗ್ರೆಸ್ ಕೂಡ ಕೇಂದ್ರ ಸರ್ಕಾರದ ವಿರುದ್ಧ ಇದೇ ಏಪ್ರಿಲ್ ತಿಂಗಳಲ್ಲಿ ಪ್ರತಿಭಟನೆ ಮೂಲಕ ಸಮರ ಸಾರಲಿದ್ದೇವೆ ಎಂದು ಹೇಳಿತ್ತು. ಈ ಹಿನ್ನೆಲೆಯಲ್ಲಿ ಎಎಪಿ ಹಾಗೂ ಕಾಂಗ್ರೆಸ್ ಒಟ್ಟಿಗೆ ಸಮರ ಸಾರುವ ಕಾರ್ಯಗಳು ಶೀಘ್ರದಲ್ಲಿಯೇ ಗರಿಗೆದರಲಿವೆ ಎನ್ನಲಾಗಿದೆ.  
 
ಕೇಂದ್ರವು ಭೂ ಸ್ವಾಧೀನ ಕಾಯಿದೆಯನ್ನು ಜಾರಿಗೆ ತಂದಿದ್ದು, ಜ.12ರಂದು ಕಾಯಿದೆಯ ಅಡಿಯಲ್ಲಿ ಸುಗ್ರೀವಾಜ್ಞೆಯನ್ನೂ ಹೊರಡಿಸಿತ್ತು. ಆದರೆ ಈ ಕಾಯಿದೆ ಹೆಸರಿನಲ್ಲಿ ಕೇಂದ್ರ ಸರ್ಕಾರವು ರೈತರ ಫಲವತ್ತಾದ ಭೂಮಿಯನ್ನು ನಗರಾಭಿವೃದ್ಧಿ ಹೆಸರಿನಲ್ಲಿ ಕಸಿಯುವ ಯತ್ನಕ್ಕೆ ಕೈ ಹಾಕಿದೆ. ಇದು ರೈತ ವಿರೋಧಿ ಕಾಯಿದೆ ಎಂಬುದು ವಿರೋಧ ಪಕ್ಷಗಳ ಅಭಿಪ್ರಾಯವಾಗಿದ್ದು, ಇದೇ ಕೇಂದ್ರ ಸರ್ಕಾರದ  ವಿರುದ್ಧ ಸಮರ ಸಾರಲು ಕಾರಣವಾಗಿದೆ.   

Share this Story:

Follow Webdunia kannada