ಮೋಜು ಮಸ್ತಿಗಾಗಿ ಅಪಹರಣ, ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಬಂಧನ

Webdunia
ಶುಕ್ರವಾರ, 23 ನವೆಂಬರ್ 2018 (16:20 IST)
ಮದ್ಯಪಾನ, ಮೋಜು ಮಸ್ತಿಗಾಗಿ ಅಪಹರಣ  ಹಾಗೂ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಸದಸ್ಯರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ

ಈಚೆಗೆ ಕ್ಯಾಬ್ ಚಾಲಕನನ್ನು ಅಪಹರಿಸಿದ್ದ ಡೆಂಕಣಿಕೋಟೆ ಗ್ಯಾಂಗ್ ನವರು  50 ಸಾವಿರ ರೂ.ಗಳ ಸುಲಿಗೆ ಮಾಡಿದ್ದರು. ಪ್ರಕರಣ ಬೆನ್ನು ಹತ್ತಿ ತನಿಖೆ ಆರಂಭಿಸಿ ಐವರು ತಮಿಳುನಾಡಿನ ಡೆಂಕಣಿಕೋಟೆಯ ಅಪಹರಣಕಾರರ ಗ್ಯಾಂಗ್ನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ವೀವರ್ಸ ಕಾಲೋನಿಯ ಕೃಷ್ಣನಾಯಕ್ ಅಲಿಯಾಸ್ ಕಳ್ಳಕೃಷ್ಣ (24), ಯಶ್ವಂತ್ ಕುಮಾರ್ ಅಲಿಯಾಸ್ ಕೋತಿ (23), ರಮೇಶ್ ಅಳಿಯಾಸ್ ಸ್ವಾಮಿ (20), ಶಶಿಕುಮಾರ್ ಅಲಿಯಾಸ್ ಶಶಿ (22), ಅರುಣ್ ಕುಮಾರ್ ಅಲಿಯಾಸ್ ಕೊಂಗ (20) ಬಂಧಿತ ಗ್ಯಾಂಗ್ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾಬೋರಲಿಂಗಯ್ಯ ತಿಳಿಸಿದ್ದಾರೆ.
ಬಂಧಿತರಿಂದ ನಗದು ಸೇರಿ, 3 ಲಕ್ಷ 63 ಸಾವಿರ ರೂಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹರಿಬಾಬು ಎಂಬುವರು ಅವರ ಅಣ್ಣನ ಟಾಟಾ ಇಂಡಿಕಾ ಕಾರನ್ನು ಖಾಸಗಿ ಕಂಪನಿಯೊಂದರ ಉದ್ಯೋಗಿಗಳನ್ನು ಕರೆದುಕೊಂಡು ಬಿಡುವ ಕೆಲಸ ಮಾಡುತ್ತಿದ್ದ.
ಕಂಪನಿಯ ಉದ್ಯೋಗಿಗಳನ್ನು ಮನೆಗೆ ಬಿಟ್ಟು ಮನೆಗೆ ಬರುತ್ತಿದ್ದಾಗ ಅಡ್ಡಗಟ್ಟಿದ ಬಂಧಿತ ಗ್ಯಾಂಗ್ಕಾರಿನ ಜತೆ ಹರಿಬಾಬುನನ್ನು ಅಪಹರಿಸಿಕೊಂಡು ಪರಾರಿಯಾಗಿತ್ತು.

ಮೊದಲಿಗೆ ಹರಿಬಾಬುನ ಅಣ್ಣ ಅಶೋಕ್ಗೆ ಕರೆ ಮಾಡಿ 50 ಸಾವಿರ ರೂ.ಗಳನ್ನು ಬ್ಯಾಂಕಿನ ಅಕೌಂಟ್ಗೆ ಹಾಕುವಂತೆ ಹೇಳಿ ಅದನ್ನು ತೆಗೆದುಕೊಂಡಿದ್ದ ಆರೋಪಿಗಳುಆನೇಕಲ್ಕೊಳ್ಳೆಗಾಲ ಇನ್ನಿತರ ಕಡೆ ಸುತ್ತಾಡಿಸುತ್ತ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದರುಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಇನ್ಸ್ಪೆಕ್ಟರ್ ರಾಜೇಶ್ ಮತ್ತವರ ತಂಡ ಗ್ಯಾಂಗ್ನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments