Publish Date: Tue, 24 Oct 2017 (09:28 IST)
Updated Date: Tue, 24 Oct 2017 (09:32 IST)
ಬೆಂಗಳೂರು: ಛಾಪಾ ಹಗರಣದಲ್ಲಿ ಪರಪ್ಪನ ಅಗ್ರಹಾರ ಜೈಲಲ್ಲಿ ಶಿಕ್ಷೆಗೊಳಗಾಗಿರುವ ಅಬ್ದುಲ್ ಕರೀಂ ತೆಲಗಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಜೀವನ್ಮರಣದ ಸ್ಥಿತಿಯಲ್ಲಿದ್ದಾನೆ.
ಜೈಲಲ್ಲಿ ಕುಸಿದು ಬಿದ್ದ ತೆಲಗಿಗೆ ವಿಕ್ಟೋರಿಯಾ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಆತ ಬದುಕುಳಿಯುವ ಸಾಧ್ಯತೆ ಬಗ್ಗೆ ಏನನ್ನೂ ಹೇಳಲಾಗದು ಎಂದು ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದ್ದು, ತೆಲಗಿ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಹಿಂದೊಮ್ಮೆ ಡಿಐಜಿ ರೂಪಾ ಇದೇ ತೆಲಗಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ