Webdunia - Bharat's app for daily news and videos

Install App

ಕಾನೂನು ಪ್ರಕ್ರಿಯೆ ಮುಗಿದರೆ ಇಂದೇ ತೆಲಗಿ ಮರಣೋತ್ತರ ಪರೀಕ್ಷೆ

Webdunia
ಶುಕ್ರವಾರ, 27 ಅಕ್ಟೋಬರ್ 2017 (08:19 IST)
ಬೆಂಗಳೂರು: ಬಹುಕೋಟಿ ನಕಲಿ ಛಾಪಾ ಕಾಗದ ಹಗರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ಲಾಲ್‌ ತೆಲಗಿ(56) ನಿನ್ನೆ ಸಂಜೆ(ಅ.26) ಮೃತಪಟ್ಟಿದ್ದಾನೆ.

ಅಧಿಕ ರಕ್ತದೊತ್ತಡ, ಮೆದುಳು ಜ್ವರ, ಬಹು ಅಂಗಾಂಗ ವೈಫ‌ಲ್ಯದಿಂದ ಬಳಲುತ್ತಿದ್ದ ತೆಲಗಿ, 13 ದಿನದಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಕಳೆದ ಮೂರುದಿನದಿಂದ ಐಸಿಯು ನಲ್ಲಿ ವೆಂಟಿಲೇಟರ್‌ ಮೂಲಕ ನೀಡುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮಧ್ಯಾಹ್ನ 3:55ರ ಸುಮಾರಿಗೆ ಮೃತಪಟ್ಟಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.

ಚಿಕಿತ್ಸೆ ಫ‌ಲಿಸದೆ ತೆಲಗಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ಆಸ್ಪತ್ರೆಗೆ ತೆರಳಿ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಇಂದು ಮರಣೋತ್ತರ ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಬಳಿಕ ಇಂದೇ ಆತನ ಪತ್ನಿ, ಮಗಳು ಸನಾ ಸೇರಿದಂತೆ ಸಂಬಂಧಿಕರ ವಶಕ್ಕೆ ಮೃತದೇಹವನ್ನು ವೈದ್ಯರು ಹಸ್ತಾಂತರಿಸಲಿದ್ದಾರೆ. ಬೆಳಗಾವಿಯ ಖಾನಾಪುರದಲ್ಲಿ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತೆಲಗಿ ಕುಟುಂಬ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments