Webdunia - Bharat's app for daily news and videos

Install App

ಮರಳು ಮೂಟೆಗಳನ್ನು ಹೊತ್ತು ಅಭಿಮನ್ಯು ತಾಲೀಮು

Webdunia
ಮಂಗಳವಾರ, 6 ಸೆಪ್ಟಂಬರ್ 2022 (20:49 IST)
ಸಾಂಸ್ಕೃತಿಕ ನಗರಿ ಮೈಸೂರಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಜಂಬೂಸವಾರಿ ಮೆರವಣಿಗೆಗೆ 1 ತಿಂಗಳು ಬಾಕಿ ಇದೆ. ಗಜಪಡೆ ಕ್ಯಾಪ್ಟನ್  ಅಭಿಮನ್ಯು ಅಂಡ್ ಟೀಮ್ ಈಗಾಗಲೇ ವಿಜಯದಶಮಿ ಮೆರವಣಿಗೆಗೆ ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದು, ಮರದ ಅಂಬಾರಿ ಹೊತ್ತು ಸಾಗುವ ತಾಲೀಮಿಗೆ ಸೋಮವಾರ ಚಾಲನೆ ದೊರೆತಿದೆ.
ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ವಿಜಯದಶಮಿ ಮೆರವಣಿಗೆಯಲ್ಲಿ ಸಾಗಬೇಕಿದೆ. ಹೀಗಾಗಿ ಆನೆಗೆ ತಾಲೀಮು ಮಾಡಿಸಿ ಅಣಿಗೊಳಿಸಲಾಗುತ್ತಿದೆ.
 
ದಸರಾ ಗಜಪಡೆಯ ತಾಲೀಮು ಸೋಮವಾರದಿಂದ ಮತ್ತಷ್ಟು ಚುರುಕು ಪಡೆದುಕೊಂಡಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಮರದ ಅಂಬಾರಿ ಹೊತ್ತು ಅಭಿಮನ್ಯುವಿಗೆ ತಾಲೀಮು ಆರಂಭಿಸಲಾಯಿತು. ಈ ಬಾರಿಯ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಸಂಜೆಯ ವೇಳೆಗೆ ಹೊರಡಲಿದೆ. ಹಾಗಾಗಿ ದಸರಾ ಗಜಪಡೆ ಸಂಜೆಯ ವಾತಾವರಣಕ್ಕೆ ಹೊಂದಿಕೊಳ್ಳುವಂತೆಯೇ‌ ತರಬೇತಿ ನೀಡಲಾಗುತ್ತಿದೆ. ಮೊದಲ ದಿನದ ತಾಲೀಮು ಯಶಸ್ವಿಯಾಗಿದ್ದು, ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವಿಗೆ ಇತರೆ ಆನೆಗಳು ಸಾಥ್ ನೀಡಿವೆ.
 
ಮೊದಲ ದಿನದ ಮರದ ಅಂಬಾರಿ ಹೊರುವ ತಾಲೀಮಿನ ವೇಳೆ 750 ಕೆ.ಜಿಗೂ ಹೆಚ್ಚು ಭಾರವನ್ನು ಹೊತ್ತು ಸಾಗಿದ ಅಭಿಮನ್ಯು ಶಕ್ತಿ ಕಂಡು ಎಲ್ಲರೂ ಸಂತಸಪಟ್ಟರು. 280 ಕೆ.ಜಿ ತೂಕದ ಮರದ ಅಂಬಾರಿ ಜೊತೆಗೆ ಗಾದಿ, ನಮ್ದಾ ಹಾಗೂ ಮರಳಿನ ಮೂಟೆಗಳು ಸೇರಿದಂತೆ 750 ಕೆ.ಜಿಗೂ ಹೆಚ್ಚಿನ ಭಾರ ಹೊತ್ತು ಸಾಗಿದ ಅಭಿಮನ್ಯು ಬನ್ನಿಮಂಟಪದ ವರೆಗೂ ಸಾಗಿ ಅರಮನೆಗೆ ವಾಪಸ್ ಹಿಂತಿರುಗಿದ್ದಾನೆ.ಅಭಿಮನ್ಯು ಜೊತೆಗೆ ಧನಂಜಯ ಮತ್ತು ಮಹೇಂದ್ರ ಆನೆಗಳಿಗೂ ಮರದ ಅಂಬಾರಿ ಹೊತ್ತು ಸಾಗುವ ತಾಲೀಮು ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments