Select Your Language

Notifications

webdunia
webdunia
webdunia
webdunia

ನಾನು ರಾಜಕೀಯದಲ್ಲಿ ಇರುವವರೆಗೆ ಅಭಿಷೇಕ್ ರಾಜಕೀಯಕ್ಕೆ ಬರಲ್ಲ: ಸುಮಲತಾ

ನಾನು ರಾಜಕೀಯದಲ್ಲಿ ಇರುವವರೆಗೆ ಅಭಿಷೇಕ್ ರಾಜಕೀಯಕ್ಕೆ ಬರಲ್ಲ: ಸುಮಲತಾ
ಮಂಡ್ಯ , ಶುಕ್ರವಾರ, 10 ಮಾರ್ಚ್ 2023 (15:13 IST)
ಮಂಡ್ಯ : ಅಂಬರೀಶ್, ನಾನು, ಅಭಿಷೇಕ್ ಕುಟುಂಬ ರಾಜಕೀಯ ಮಾಡಲ್ಲ. ನಾನು ರಾಜಕೀಯದಲ್ಲಿ ಇರುವವರೆಗೆ ಅಭಿಷೇಕ್ ರಾಜಕೀಯಕ್ಕೆ ಬರಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದರು.
 
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಬೆಂಬಲಿಗರು, ಅಂಬರೀಶ್ ಅವರ ಅಭಿಮಾನಿಗಳಿಗೆ ಒಂದು ನೆಲೆಕೊಡಿಸಬೇಕು. ಆ ಜವಾಬ್ದಾರಿ ನನ್ನ ಮೇಲೆ ಇದೆ. ನಮ್ಮ ಪಕ್ಷಕ್ಕೆ ಸೇರಿ ಎಂದು ನನ್ನ ಎಲ್ಲಾ ಕಡೆಯಿಂದ ಆಹ್ವಾನ ಬಂದಿದೆ ಎಂದರು.

ನನ್ನ ಬೆಂಬಲಿಗರು ಸಭೆ ಮಾಡಿದ್ದಾರೆ. ನಾನು ಬೆಂಬಲಿಗರಿಗೆ ಹೇಳಿದ್ದೆ, ಒತ್ತಡಕ್ಕೆ ಮಣಿಯಬೇಡಿ, ನಿಮ್ಮ ಭವಿಷ್ಯವೂ ಬೇಕು. ನೋಡಿ ಮಂಡ್ಯ ಅಭಿವೃದ್ಧಿಗೆ ನನ್ನ ಕೈ ಜೋಡಿಸುತ್ತೀರಾ ಎಂದಿದ್ದೆ. ನಮ್ಮ ಕುಟುಂಬದಲ್ಲಿ ಕುಟುಂಬ ರಾಜಕೀಯ ಮಾಡಿಲ್ಲ. ಚಾಮುಂಡಿ ತಾಯಿ ಮೇಲೆ ಆಣೆ ನಾನು ಅಭಿಷೇಕ್ಗೆ ಟಿಕೆಟ್ ಕೊಡಿ ಎಂದು ಹೇಳಿಲ್ಲ ಎಂದು ಹೇಳಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದ ಬೆಳವಣಿಗೆಗೆ ಪೂರಕ : ಮೋದಿ ಬಣ್ಣನೆ