Webdunia - Bharat's app for daily news and videos

Install App

ಮಹಿಳೆಗೆ ಹಾಡಗಲೇ ಬೆಂಕಿ ಹಚ್ಚಿ ಹತ್ಯೆಗೈದ ದುಷ್ಕರ್ಮಿಗಳು

Webdunia
ಬುಧವಾರ, 25 ಫೆಬ್ರವರಿ 2015 (16:31 IST)
ಮಹಿಳೆಯೋರ್ವಳ ಮೇಲೆ ನೂರಾರು ಜನರ ಎದುರೇ ಸೀಮೆಎಣ್ಣೆ ಸುರಿದ ದುಷ್ಕರ್ಮಿಗಳು, ಆಕೆಗೆ ಬೆಂಕಿ ಹಚ್ಚುವ ಮೂಲಕ ಹಾಡಗಲೇ ದಾರುಣವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ನಗರ ಪ್ರದೇಶದಲ್ಲಿ ನಡೆದಿದೆ.  
 
ಸಾವಿರಾರು ಮಂದಿ ಜನರು ನೆರೆದಿದ್ದರೂ ಕೂಡ ಹಠಾತ್ತಾಗಿ ಆಗಮಿಸಿದ ದುಷ್ಕರ್ಮಿಗಳ ಗುಂಪೊಂದು ನಿಂತಿದ್ದ ಮಹಿಳೆಯ ಮೇಲೆ ಏಕಾಏಕಿ ಎರಗಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದೆ. ಈ ಮೂಲಕ ಮಹಿಳೆಯನ್ನು ಹತ್ಯೆಗೈಯ್ಯಲಾಗಿದ್ದು, ಘಟನೆಯು ಇಂದು ಮಧ್ಯಾಹ್ನ ಸರಿ ಸುಮಾರು 12.30ರ ವೇಳೆಯಲ್ಲಿ ನಡೆದಿದೆ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ. ದುಷ್ಕರ್ಮಿ ಹಾಗೂ ಮಹಿಳೆಯ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. 
 
ಇನ್ನು ಸ್ಥಳಕ್ಕೆ ನಿಪ್ಪಾಣಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇನ್ನು ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಪೊಲೀಸರು, ಹಿಂದಿನ ದ್ವೇಷ ಹಿನ್ನೆಲೆಯಲ್ಲಿ ಮಹಿಳೆಯನ್ನು ಹತ್ಯೆಗೈಯ್ಯಲಾಗಿದೆ ಎಂಬುದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments