ಅನಧಿಕೃತವಾಗಿ ನೇತುಹಾಕಿರುವ ಟಿವಿ ಕೇಬಲ್ ಹಾಗೂ ಓ.ಎಫ್.ಸಿ ಕೇಬಲ್‌ಗಳನ್ನು ತೆರವುಗೊಳಿಸುವ ಬಗ್ಗೆ

Webdunia
ಮಂಗಳವಾರ, 24 ಆಗಸ್ಟ್ 2021 (20:46 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಟಿವಿ ಕೇಬಲ್ ಆಪರೇಟರ್‌ಗಳು, ಓ.ಎಫ್.ಸಿ ಕೇಬಲ್ , ಸೇವಾ ಸಂಸ್ಥೆ(Internet Service Provider)ಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಸಂಸ್ಥೆಗಳು ಪಾಲಿಕೆ ವ್ಯಾಪ್ತಿಯ ರಸ್ತೆ ಪಾದಚಾರಿ ಮಾರ್ಗ, ರಸ್ತೆ ಬದಿ ಮರಗಳು ಮತ್ತು ವಿದ್ಯುತ್ ಕಂಬಗಳ ಮೇಲೆ ಹಾಗೂ ಇತರೆಡೆ ಅನಧಿಕೃತವಾಗಿ ನೇತುಹಾಕಿರುವ ಬಿವಿ ಕೇಬಲ್ ಹಾಗೂ ಓ.ಎಫ್.ಸಿ ಕೇಬಲ್‌ಗಳನ್ನು ತೆರವುಗೊಳಿಸುವಂತೆ ಘನ ಉಚ್ಚ ನ್ಯಾಯಾಲಯವು ಲವ್ ಅರ್ಜಿ ಸಂಖ್ಯೆ: 15291/2020 , ದಿನಾಂಕ : 24-02-2021 ಮತ್ತು 03-08-2021ರ ದೈನಂದಿನ ಆದೇಶದಲ್ಲಿ ನಿರ್ದೇಶನ ನೀಡಿರುತ್ತದೆ. 
 
ಆದ್ದರಿಂದ ಈ ತಿಳುವಳಿಕೆ ಪತ್ರ ಪ್ರಕಟಣೆಯಾದ ದಿನದಿಂದ 01 ತಿಂಗಳ ಅವಧಿಯೊಳಗೆ ಎಲ್ಲಾ ಅನಧಿಕೃತ ಟಿವಿ ಕೇಬಲ್, ಓ.ಎಫ್.ಸಿ ಕೇಬಲ್ ಹಾಗೂ ಇತರೆ ಕೇಬಲ್‌ಗಳನ್ನು ತೆರವುಗೊಳಿಸಬೇಕೆಂದು ಸಂಬಂಧಪಟ್ಟ ಕೇಬಲ್ ಆಪರೇಟರ್‌ಗಳು, ಓ.ಎಫ್.ಸಿ ಕೇಬಲ್ ಸೇವಾ ಸಂಸ್ಥೆ(Internet Service Provider)ಗಳು ಹಾಗೂ ಸಂಬಂಧಪಟ್ಟವರು ನಿಗದಿತ ಅವಧಿಯಲ್ಲಿ ತೆರವುಗೊಳಿಸಬೇಕು. ತೆರವುಗೊಳಿಸಲು ವಿಫಲವಾದ ಪಕ್ಷದಲ್ಲಿ ಅಂತಹ ಅನಧಿಕೃತ ಕೇಬಲ್‌ಗಳನ್ನು ಯಾವುದೇ ಮುನ್ಸೂಚನೆ ನೀಡದೆ ತೆರವುಗೊಳಿಸಲು ಕ್ರಮವಹಿಸಲಾಗುವುದು ಹಾಗೂ ಅಂತಹ ಅನಧಿಕೃತ ಮಾಲೀಕರು/ಸಂಘ - ಸಂಸ್ಥೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ ರವರು ಈ ತಿಳಿಸಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರು ಢಿಕ್ಕಿ ಹೊಡೆದ ರಭಸಕ್ಕೆ ಮಾರು ದೂರ ಹಾರಿ ಬಿದ್ದ ಮಹಿಳೆ: ಭೀಕರ ದೃಶ್ಯ Video

Karnataka Weather: ಕರಾವಳಿ ಸೇರಿದಂತೆ ಈ ಜಿಲ್ಲೆಗಳಿಗೆ ಇಂದು ಗುಡುಗು ಸಹಿತ ಮಳೆ ಸೂಚನೆ

ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಬಿಜೆಪಿ, ಕಾರಣ ಇಲ್ಲಿದೆ

ತಮಿಳುನಾಡು ವಿಧಾನಸಭಾ ಚುನಾವಣೆ: ಗೃಹೋಪಯೋಗಿ ಕೂಪನ್‌ ಪ್ರಕಟಿಸಿದ ಉದಯನಿಧಿ ಸ್ಟಾಲಿನ್, ಎಷ್ಟು ಹಣ ಗೊತ್ತಾ

ಪ್ಲಾಟ್‌ಫಾರ್ಮ್‌ನಲ್ಲಿ ನಿಂತವರ ಮೇಲೆಯೇ ಎರಗಿದ ಬಸ್‌, ಎದೆ ಝಲ್ಲೆನಿಸುತ್ತದೆ, Video

ಮುಂದಿನ ಸುದ್ದಿ
Show comments