Webdunia - Bharat's app for daily news and videos

Install App

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿರುವ ಬಗ್ಗೆ

Webdunia
ಶುಕ್ರವಾರ, 10 ಸೆಪ್ಟಂಬರ್ 2021 (19:48 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರಮುಖ ರಸ್ತೆ, ವಾರ್ಡ್ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲಾಗುತ್ತಿದ್ದು, ವಾಹನ ಸವಾರರಿಗೆ ಯಾವುದೇ ತೊಂದರೆಯಾಗದಂತೆ ಸುಗಮ‌ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ.
 
ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ: 09-09-2021ರಂದು ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆ ರವರು ಮೈಸೂರು ರಸ್ತೆ ನಾಯಂಡಹಳ್ಳಿ  ಜಂಕ್ಷನ್ ಬಳಿ ನಾಗರಭಾವಿ ಸರ್ವೀಸ್ ರಸ್ತೆಯಿಂದ ನಾಯಂಡಹಳ್ಳಿ ರಿಂಗ್ ರಸ್ತೆ ಕಡೆ ಬರುವ ಸರ್ವೀಸ್ ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವುದರಿಂದ ಮಳೆ ಬಿದ್ದಾಗ ಗುಂಡಿಗಳಲ್ಲಿ ನೀರು ತುಂಬಿ ವಾಹನ ಸಂಚಾರದ ವೇಳೆ ಸಂಚಾರ ದಟ್ಟಣೆಯಾಗುತ್ತಿದೆ. ಇದರಿಂದ ವಾಹನ ಸವಾರರಿಗೆ ಹೆಚ್ಚು ಸಮಸ್ಯೆ ಆಗಲಿದ್ದು, ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಕೋರಲಾಗಿತ್ತು.
 
ಅದರಂತೆ ಪಾಲಿಕೆಯ ಸಂಚಾರಿ ಇಂಜಿನಿಯರಿಂಗ್ ವಿಭಾಗವು ಕೂಡಲೆ ಕ್ರಮ ಕೈಗೊಂಡು ನಿನ್ನೆ ರಾತ್ರಿ ಅಗತ್ಯ ಸಿಬ್ಬಂದಿ ಹಾಗೂ ಯಂತ್ರೋಪಕರಣಗಳನ್ನು ನಿಯೋಜನೆ ಮಾಡಿಕೊಂಡು ದುರಸ್ತಿ ಕಾಮಗಾರಿ ನಡೆಸಿ ಇಂದು ಬೆಳಗ್ಗೆ 2.30ರ ವೇಳೆಗೆ ಡಾಂಬರು ಹಾಕಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ದುರಸ್ತಿ ಕಾಮಗಾರಿ ವೇಳೆ ಪಾಲಿಕೆ ಇಂಜಿನಿಯರ್, ಸಂಚಾರಿ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು, ರಸ್ತೆ ಮೇಲೆ ನೀರು ನಿಲ್ಲದಂತೆ ಶೋಲ್ಡರ್ ಡ್ರೈನ್ ಮೂಲಕ ರಾಜಕಾಲುವೆಗೆ ಸರಾಗವಾಗಿ ನೀರು ಹರಿದು ಹೋಗುವಂತೆ ಡಾಂಬರನ್ನು ಅಳವಡಿಸಲಾಗಿರುತ್ತದೆ.
 
ಪಾಲಿಕೆಯ ಎಂಟೂ ವಲಯಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದ್ದು, ದಿನಾಂಕ:10/09/2021 ರಂದು(ಇಂದು) ಜರಗನಹಳ್ಳಿ, ಬನಶಂಕರಿ 2ನೇ ಹಂತ, ಹೆಚ್.ಎಂ.ಟಿ ಲೇಔಟ್, ಯಡಿಯೂರು, ಬೆಳ್ಳಂದೂರು, ಸಿದ್ದಣ್ಣ ಲೇಔಟ್, ತಿಗರಳ ಪಾಳ್ಯ(ಹೂಡಿ), ನ್ಯೂ ಬಿ.ಇ.ಎಲ್ ರಸ್ತೆ, ಭೂಪಸಂದ್ರ, ಹೆಬ್ಬಾಳ ಮುಖ್ಯ ರಸ್ತೆ ಸೇರಿದಂತೆ ಇನ್ನಿತರೆ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲಾಗಿದ್ದು, ಹಾಗೂ ನಗರದ ಎಲ್ಲಾ ಕಡೆ ರಸ್ತೆಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ.
road
road

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments