Webdunia - Bharat's app for daily news and videos

Install App

ಶಿಕ್ಷಣ ಇಲಾಖೆಗೆ ತಲೆನೋವಾದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳ ಗೈರುಹಾಜರಿ

Webdunia
ಶುಕ್ರವಾರ, 1 ಏಪ್ರಿಲ್ 2022 (19:50 IST)
ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಮಾಡಿರುವ ಶಿಕ್ಷಣ ಇಲಾಖೆಗೆ ಮಕ್ಕಳು ಗೈರುಹಾಜರಾಗುತ್ತಿರುವುದು ತಲೆನೋವಾಗಿ ಪರಿಣಮಿಸಿದೆ. ದಿನೇದಿನೇ ಪರೀಕ್ಷೆಗೆ ಗೈರು ಹಾಜರಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಿಜಾಬ್​ಗಿಂತಲೂ ಪರೀಕ್ಷೆ ಮುಖ್ಯ ಎಂದು ವಿದ್ಯಾರ್ಥಿಗಳು ಬರ್ತಿದ್ದಾರೆ. ಹಿಜಾಬ್ ಗಂಭೀರ ಸಮಸ್ಯೆಯೇ ಇಲ್ಲ ಎಂದು ಶಿಕ್ಷಣ ಇಲಾಖೆಯ ಕೆಲ ಅಧಿಕಾರಿಗಳು ವಾದಿಸುತ್ತಿದ್ದಾರೆ. ಆದರೆ ಪರೀಕ್ಷೆಯ ಮೊದಲ ಮತ್ತು ಎರಡನೇ ದಿನ ಪರೀಕ್ಷೆಗೆ ಸಾಲುಸಾಲಾಗಿ ಗೈರು ಹಾಜರಾಗಿದ್ದು ಏಕೆ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.
 
ಪರೀಕ್ಷೆಗೆ ಹಲವು ವಿದ್ಯಾರ್ಥಿಗಳು ಗೈರು ಹಾಜರಾಗಿರುವ ಹಿನ್ನೆಲೆಯಲ್ಲಿ ಏನು ಕಾರಣ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ ಸಚಿವರ ಸೂಚನೆ ಮೇರೆಗೆ, ಗೈರು ಹಾಜರಿಗೆ ಸೂಕ್ತ ಕಾರಣ ತಿಳಿದು ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಎರಡೂ ದಿನವೂ ಪರೀಕ್ಷೆಗೆ ಎಷ್ಟು ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂಬ ಬಗ್ಗೆ ಮಕ್ಕಳನ್ನು ಅಥವಾ ಅವರ ಪೋಷಕರನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿ ಮಾಹಿತಿ ಸಂಗ್ರಹಿಸಿ ತಿಳಿಸಬೇಕು ಎಂದು ಶಿಕ್ಷಣ ಇಲಾಖೆ ಮೌಖಿಕ ಸೂಚನೆ ನೀಡಿದೆ.ಎಸ್​ಎಸ್​ಎಲ್​ಸಿ ಪರೀಕ್ಷೆಯ 2ನೇ ದಿನವಾದ ಬುಧವಾರ (ಮಾರ್ಚ್ 30) ಸಾವಿರಾರು ವಿದ್ಯಾರ್ಥಿಗಳು ಗೈರಾಗಿದ್ದರು. ದ್ವಿತೀಯ ಭಾಷೆ ಇಂಗ್ಲಿಷ್​ಗೆ ಬರೋಬ್ಬರಿ 22,063 ವಿದ್ಯಾರ್ಥಿಗಳು ಗೈರಾಗಿದ್ದರು. ಮೊದಲ ದಿನದ ಪರೀಕ್ಷೆಗಿಂತ ನಿನ್ನೆ ಹೆಚ್ಚು ವಿದ್ಯಾರ್ಥಿಗಳು ಗೈರಾಗಿರುವುದು ಶಿಕ್ಷಣ ಇಲಾಖೆಗೆ ತಲೆನೋವಾಗಿದೆ. ಅನಾರೋಗ್ಯ ಕಾರಣದಿಂದ ವಿಶೇಷ ಕೊಠಡಿಯಲ್ಲಿ 195 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಮೊದಲ ದಿನದ ಪರೀಕ್ಷೆಯಲ್ಲಿ 20,994 ವಿದ್ಯಾರ್ಥಿಗಳು ಗೈರಾಗಿದ್ದರು. ಎರಡನೇ ದಿನದ ಪರೀಕ್ಷೆಯಲ್ಲಿ ಬರೋಬ್ಬರಿ 22,063 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ದ್ವಿತೀಯ ಭಾಷೆಯನ್ನು ಒಟ್ಟು 8,68,206 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದರು. ಈ ಪೈಕಿ 8,46,143 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

Pope Francis Passes away: ಕ್ಯಾಥೋಲಿಕ್ ಪರಮೋಚ್ಛ ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

Rahul Gandhi: ಚುನಾವಣೆ ಆಯೋಗವೇ ಅಕ್ರಮ ಮಾಡ್ತಿದೆ: ಅಮೆರಿಕಾದಲ್ಲಿ ಕಿಡಿ ಕಾರಿದ ರಾಹುಲ್ ಗಾಂಧಿ, ದೇಶದ್ರೋಹಿ ಎಂದ ಬಿಜೆಪಿ

ಮುಂದಿನ ಸುದ್ದಿ
Show comments