Webdunia - Bharat's app for daily news and videos

Install App

ಅವಾಚ್ಯ ಶಬ್ದಗಳಿಂದ ನಿಂದನೆ: ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್‌

Sampriya
ಮಂಗಳವಾರ, 19 ಆಗಸ್ಟ್ 2025 (14:59 IST)
Photo Credit facebook
ಬ್ರಹ್ಮಾವರ: ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿದ ಆರೋಪದಡಿಯಲ್ಲಿ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ದೂರು ದಾಖಲಾಗಿದೆ.

ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಉಡು‍ಪಿ ಗ್ರಾಮಾಂತರ ಬಿಜೆಪಿಯ ಮಂಡಳಾಧ್ಯಕ್ಷರಾದ ರಾಜೀವ ಕುಲಾಲ್ ಅವರು ಈ ಸಂಬಂಧ ದೂರು ನೀಡಿದ್ದಾರೆ. ಆಗಸ್ಟ್ 16 ರಂದು ಫೇಸ್ ಬುಕ್‌ ಪೇಜ್‌ ನಲ್ಲಿ ವೀಡಿಯೋ ಮಾಡಿ ಪಕ್ಷದ ಹಿರಿಯರು, ಹಿಂದೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿ ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇ಼ಷ
ಭಾವನೆಯನ್ನು ಉಂಟು ಮಾಡಿರುವ ಮಹೇಶ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮಕ್ಕಾಗಿ ಒತ್ತಾಯಿಸಿದ್ದಾರೆ. 

ಬ್ರಹ್ಮಾವರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 177/2025 US 196 (1),352, 353(2) BNSರಂತೆ ಆರೋಪಿ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನಾ ಯೋಧನ ಮೇಲೆ ಹಿಗ್ಗಾಮುಗ್ಗಾ ಥಳಿತ, ಟೋಲ್ ಸಂಗ್ರಹ ಸಂಸ್ಥೆಗೆ ಬಿತ್ತು ಭಾರೀ ದಂಡ

ಅವಾಚ್ಯ ಶಬ್ದಗಳಿಂದ ನಿಂದನೆ: ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್‌

ಒಳಮೀಸಲಾತಿಯಲ್ಲಿ ಎಲ್ಲಾ ಜಾತಿಯವರಿಗೂ ನ್ಯಾಯ ಕೊಡಿ: ವಿಜಯೇಂದ್ರ ಆಗ್ರಹ

ಇಂಡಿಯಾ ಒಕ್ಕೂಟದ ಉಪರಾಷ್ಟ್ರಪತಿ ಸುದರ್ಶನ ರೆಡ್ಡಿ ಯಾರು

ಕೆಲಸಕ್ಕಿದ್ದ ಮನೆಯವರನ್ನೇ ತನ್ನ ಮಗಳು ಎಂದು ಏಮಾರಿಸಿದ್ರಾ ಸುಜಾತ ಭಟ್

ಮುಂದಿನ ಸುದ್ದಿ
Show comments