Webdunia - Bharat's app for daily news and videos

Install App

ಕೇಂದ್ರದಿಂದ ರಾಜಭವನ ದುರ್ಬಳಕೆ, ಅಬ್ರಾಹಂ ಒಬ್ಬ ಬ್ಲಾಕ್‌ಮೇಲರ್‌: ಸಿದ್ದರಾಮಯ್ಯ ಆರೋಪ

Sampriya
ಶುಕ್ರವಾರ, 2 ಆಗಸ್ಟ್ 2024 (14:09 IST)
ಮೈಸೂರು: ಕೇಂದ್ರ ಸರ್ಕಾರವು ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ರಾಜ್ಯದ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ರಾಜ್ಯಪಾಲರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ, ಜೆಡಿಎಸ್‌ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.

ರಾಜ್ಯಪಾಲರು ನೋಟಿಸ್ ಜಾರಿಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿದ್ದಾರೆ. ಕೆಟ್ಟ ಸಂಪ್ರದಾಯ ಆಗಬಾರದೆಂದು ನಾನು ಸಚಿವ ಸಂಪುಟ ಸಭೆಗೆ ಹೋಗಿರಲಿಲ್ಲ. ಸಭೆ ನಡೆಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಹೇಳಿದ್ದೆ. ನೋಟಿಸ್ ಕೊಟ್ಟಿರುವುದು ಕಾನೂನು ಬಾಹಿರವಾಗಿದ್ದು, ಅದನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ಸಭೆ ಸಲಹೆ ನೀಡಿದೆ ಎಂದು ತಿಳಿಸಿದರು.

ಟಿ.ಕೆ. ಅಬ್ರಾಹಂ ಒಬ್ಬ ಬ್ಲಾಕ್‌ಮೇಲರ್‌. ಅವನ ದೂರಿನ ಮೇರೆಗೆ ಕ್ರಮ ವಹಿಸಿರುವುದು ಕಾನೂನು ಬಾಹಿರವಾಗಿದೆ. ಜುಲೈ 26ರಂದು ಬೆಳಿಗ್ಗೆ 11.30ಕ್ಕೆ ದೂರು ಕೊಟ್ಟಿದ್ದಾನೆ. ಅಂದೇ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ. ರಾಜ್ಯಪಾಲರ ವಿಶೇಷಾಧಿಕಾರಿ ಪ್ರಭುಶಂಕರ್‌ ರಾತ್ರಿ 10ಕ್ಕೆ ಫೋನ್ ಮಾಡಿ ನೋಟಿಸ್ ಸಿದ್ಧವಿದೆ ತೆಗೆದುಕೊಳ್ಳಬೇಕು ಎಂದು ಅತೀಕ್‌ ಅವರಿಗೆ ಹೇಳಿದ್ದಾರೆ. ಈಗ ರಾತ್ರಿ ಆಗಿರುವುದರಿಂದ ತೆಗೆದುಕೊಳ್ಳಲಾಗುವುದಿಲ್ಲ ಎಂದು ನಮ್ಮ ಅಧಿಕಾರಿ ತಿಳಿಸಿದ್ದಕ್ಕೆ, ಮರು ದಿನ ಕೊಟ್ಟಿದ್ದಾರೆ ಎಂದು ಹೇಳಿದರು.

ನಾನೊಬ್ಬ ಚುನಾಯಿತ ಸರ್ಕಾರದ ಮುಖ್ಯಮಂತ್ರಿ. ನನಗೆ ನೋಟಿಸ್ ಕೊಡುವಾಗ ಕಾನೂನನ್ನು ಸಮರ್ಪಕವಾಗಿ ನೋಡಬೇಕಿತ್ತು. ಆದರೆ, ರಾಜ್ಯಪಾಲರು ಆತುರ ಮಾಡಿದ್ದಾರೆ ಎಂದು ಆರೋಪಿಸಿದರು.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments